Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಠಲಾಪುರ ಅರಣ್ಯದಲ್ಲಿ ಕುರಿಗಳಿಗೆ ಮೇವು ಹಕ್ಕು ನೀಡುವಂತೆ ಕುರುಬರ ಸಂಘದದಿಂದ ಮನವಿ





ಬಳ್ಳಾರಿ03. : ವಿಠಲಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮೇಯಿಸಲು ತಡೆಯುತ್ತಿರುವ ಅರಣ್ಯ ಇಲಾಖೆಯ ಕ್ರಮವನ್ನು ವಿರೋಧಿಸಿ, ಬಳ್ಳಾರಿ ಜಿಲ್ಲಾ ಕುರುಬರ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಅರಣ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಸಂಘದ ಪ್ರಕಾರ, ದಿನನಿತ್ಯ ಈ ಪ್ರದೇಶದಲ್ಲಿ ಸುಮಾರು 15,000 ಕುರಿಗಳು ಮೇಯುತ್ತಿದ್ದು, 280 ಕುರಿಗಾಹಿ ಕುಟುಂಬಗಳು ತಮ್ಮ ಜೀವನೋಪಾಯವನ್ನು ಕುರಿ ಸಾಕಣೆ ಮೂಲಕ ಸಾಗಿಸುತ್ತಿದ್ದಾರೆ.


ಈವರೆಗೆ ಯಾವುದೇ ಆಹಾರದ ಕೊರತೆ ಅಥವಾ ಪರಿಸರ ನಾಶವಾಗದೇ ಕುರಿ ಸಾಕಣೆ ಸುಗಮವಾಗಿ ನಡೆಯುತ್ತಿತ್ತು. ಆದರೆ ಇತ್ತೀಚೆಗೆ ಅರಣ್ಯ ಇಲಾಖೆ ಅರಣ್ಯ ಗಡಿಭಾಗದಲ್ಲಿ ತಡೆಗೋಡೆ ಹಾಗೂ ಮುಳ್ಳು ತಂತಿಗಳನ್ನು ಅಳವಡಿಸಿ, ಕುರಿಗಳನ್ನು ಮೇಯಲು ಅಡ್ಡಿಪಡಿಸುತ್ತಿರುವುದರಿಂದ, ಕುರಿಗಳ ಸಂರಕ್ಷಣೆಯಲ್ಲಿ ತೊಂದರೆ ಉಂಟಾಗಿದೆ.


“ಇದು ಕುರಿಗಳ ಆಹಾರ ಸಮಸ್ಯೆ ಮಾತ್ರವಲ್ಲ, ಇಡೀ ಕುಟುಂಬಗಳ ಜೀವನಾಧಾರಕ್ಕೆ ಹೊಡೆತ ನೀಡುವಂತಹ ವಿಷಯ,” ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಅವರು ತಿಳಿಸಿದ್ದಾರೆ. ಮುಖಂಡರು ತಿಳಿಸಿದರು. ಅವರು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಕುರಿಗಳಿಗೆ ಮೇವು ಹಕ್ಕು ನೀಡುವಂತೆ ಹಾಗೂ ಕುರಿಗಾಹಿಗಳಿಗೆ ಆಸರೆ ನೀಡುವಂತೆ ಅರಣ್ಯ ವಲಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.


ಅರಣ್ಯ ಪ್ರದೇಶದಲ್ಲಿ ನಿಯಮಿತ ಹಾಗೂ ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಕುರಿ ಮೇಯಿಸಲು ಸಮಂಜಸವಾದ ವ್ಯವಸ್ಥೆ ಕಲ್ಪಿಸುವಂತೆ ಸಂಘ ಆಗ್ರಹಿಸಿದೆ.


ಮನವಿ ನೀಡುವ ಸಂದರ್ಭದಲ್ಲಿ ಕುರುಬರ ಸಂಘದ, ಅಧ್ಯಕ್ಷ ಗಾದಿಲಿಂಗಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಮೋಹನ್, ಖಜಾಂಚಿ ಕಾಮರಾಜ್, ಪಾಟೀಲ್ ಗೂ ವಿಠಲಾಪುರ ಗ್ರಾಮದ ಕುರಿಗಾಹಿಗಳು ಸೇರಿದಂತೆ ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ