LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಭರ್ಜರಿಯಾಗಿದೆ ಶ್ರೀಮುರಳಿ ಅಭಿನಯದ ಬಘೀರ ಚಿತ್ರದ ಟ್ರೇಲರ್   


     ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ಅವರು ನಿರ್ಮಿಸಿರುವ, ಡಾ. ಸೂರಿ ನಿರ್ದೇಶನದಲ್ಲಿ ಶ್ರೀಮುರಳಿ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ 'ಬಘೀರ' ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.


     "ಮೊದಲಿಗೆ 'ಬಘೀರ' ಚಿತ್ರವನ್ನು ನನಗೆ ನಿರ್ದೇಶಿಸಲು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಗೆ ಧನ್ಯವಾದ ತಿಳಿಸುತ್ತೇನೆ" ಎಂದು ಸಮಾರಂಭದಲ್ಲಿ  ಮಾತನಾಡಿದ ನಿರ್ದೇಶಕ ಸೂರಿ "ಈ ಚಿತ್ರದ ಕಥೆಯನ್ನು ಪ್ರಶಾಂತ್ ನೀಲ್ ಅವರು ಬಹಳ ಚೆನ್ನಾಗಿ ಬರೆದಿದ್ದಾರೆ. ಬಘೀರ ಎಂದರೆ ನೈಟ್ ಹಂಟರ್. ಇದು ರಾತ್ರಿವೇಳೆಯಲ್ಲೇ ಭೇಟೆಯಾಡುತ್ತದೆ. ನಮ್ಮ ಚಿತ್ರದ ಕಥೆಯ ಹೆಚ್ಚಿನ ಭಾಗ ರಾತ್ರಿಯಲ್ಲೇ ನಡೆಯುತ್ತದೆ. 'ಸೂಪರ್ ಹೀರೋ' ಕಾನ್ಸೆಪ್ಟ್ ನ ಈ ತರಹದ ಕಥೆ ನನ್ನ ಪ್ರಕಾರ ಕನ್ನಡದಲ್ಲಿ ಬಂದಿಲ್ಲ.‌ ಇನ್ನು , ಈ ಚಿತ್ರ ಉತ್ತಮವಾಗಿ ಮೂಡಿಬರಲು ಮುಖ್ಯ ಕಾರಣ ನಮ್ಮ ಚಿತ್ರತಂಡದ ಎಲ್ಲರ ಶ್ರಮ.‌ ಅದರಲ್ಲೂ ಹೆಚ್ಚಿನ ಶ್ರಮ ಶ್ರೀಮುರಳಿ ಅವರದು. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಅಕ್ಟೋಬರ್ 31 ರಂದ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ" ಎಂದರು.


     "ಮೂರು ವರ್ಷಗಳ ಶ್ರಮಕ್ಕೆ ಪ್ರತಿಫಲ ಸಿಗುವ ದಿನ ಸಮೀಪಿಸಿದೆ. ನಮ್ಮ ಚಿತ್ರದ ಟ್ರೇಲರ್ ಎಲ್ಲರಿಗೂ ಇಷ್ಟವಾಗಿದೆ ಎಂಬ ಭರವಸೆ ನನಗಿದೆ. ಇನ್ನು, ನಿರ್ದೇಶಕ  ಸೂರಿ ಹಾಗೂ ಹೆಮ್ಮೆಯ ಹೊಂಬಾಳೆ ಫಿಲಂಸ್ ಜೊತೆಗೆ ಕೆಲಸ ಮಾಡಿದ್ದು ಬಹಳ ಸಂತೋಷವಾಗಿದೆ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರ ಜೊತೆಗೆ ಇದು ನನ್ನ ಮೊದಲ ಚಿತ್ರ. ಟ್ರೇಲರ್ ನಲ್ಲೇ ಅವರ ಕೆಲಸ ಕಾಣುತ್ತಿದೆ. ಈ ಚಿತ್ರದ ತಂತ್ರಜ್ಞರು, ಕೆಲಸದಲ್ಲಿ ರಾಕ್ಷಸರು. ಅವರ ಕೆಲಸ ನಿಮಗೆ ತೆರೆಯ ಮೇಲೆ ಕಾಣುತ್ತಿದೆ. ಪ್ರಶಾಂತ್ ನೀಲ್ ಅವರ ಕಥೆಯ ಬಗ್ಗೆ ಹೇಳುವ ಹಾಗೆ ಇಲ್ಲ. ಅಂತಹ ಅದ್ಭುತ ಕಥೆ ಕೊಟ್ಟಿದ್ದಾರೆ ಅವರು. ರುಕ್ಮಿಣಿ ವಸಂತ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಸುಧಾರಾಣಿ ಅವರು ನನ್ನ ಅಮ್ಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸೂಪರ್ ಹೀರೋ ತರಹ ನಾನು ಕಾಣಿಸಿಕೊಂಡಾಗ ಹೆಚ್ಚು ಖುಷಿಯಾಯಿತು. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ" ಎಂದರು ನಾಯಕ ಶ್ರೀಮುರಳಿ.


     "ಪಾತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಆದರೆ ಈ ಚಿತ್ರದಲ್ಲಿ ನಟಿಸಿದ್ದು ತುಂಬಾ ಸಂತೋಷವಾಗಿದೆ" ಎಂದು ನಾಯಕಿ ರುಕ್ಮಿಣಿ ವಸಂತ್ ತಿಳಿಸಿದರು. "ಈ ಚಿತ್ರದಲ್ಲಿ ನನ್ನದು 'ಬಘೀರ'ನ  ತಾಯಿ ಪಾತ್ರ" ಎಂದರು ನಟಿ ಸುಧಾರಾಣಿ.


     "ಈವರೆಗೂ ನಾನು ನೀಡಿರುವ ಸಂಗೀತವೇ ಬೇರೆ 'ಬಘೀರ' ಚಿತ್ರದಿಂದ ನೀವು ಕೇಳುವ ಸಂಗೀತವೇ ಬೇರೆ" ಎಂದರು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್.  ಚಿತ್ರದಲ್ಲಿ ನಟಿಸಿರುವ ಪ್ರಮೋದ್ ಶೆಟ್ಟಿ ಹಾಗೂ ಗರುಡಾ ರಾಮ್ ತಮ್ಮ ಪಾತ್ರದ ಕುರಿತು ಮಾತನಾಡಿದರು. ಛಾಯಾಗ್ರಾಹಕ ಎ ಜೆ, ಕಲಾ ನಿರ್ದೇಶಕ ರವಿ ಸಂತೆಹೆಕ್ಲು, ಕಾರ್ಯಕಾರಿ ನಿರ್ಮಾಪಕ ಯೋಗಿ ಜಿ ರಾಜ್ ಮುಂತಾದವರು ತಮ್ಮ ಕೆಲಸದ ಬಗ್ಗೆ ಮಾಹಿತಿ ನೀಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ