Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿಯೇ ಬಂದಿಲ್ಲ. ಈಗಲೇ ತಮ್ಮ ಸಂವಿಧಾನಿಕ ಪವರ್ ನ್ನು ದುರುಪಯೋಗಪಡಿಸಿಕೊಂಡು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದರು.


ಮುಂದೆ ಬಂಧನವಾದರೆ ರಾಜಿನಾಮೆ ನೀಡಬೇಕಾಗುತ್ತದೆಯಲ್ಲವೇ ಎನ್ನುವ ಪ್ರಶ್ನೆಗೆ, ಊಹಾಪೋಹದ ಪ್ರಶ್ನೆಗಳಿಗೆಲ್ಲ ನಾನು ಉತ್ತರಿಸುವುದಿಲ್ಲ. ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ಅವರ ರಾಜಕೀಯಕ್ಕೆ ನಾವೂ ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೆಬ್ಬಾಳಕರ್ ತಿಳಿಸಿದರು.


ಅಂದಿನ ಯಡಿಯೂರಪ್ಪ ಪ್ರಕರಣಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಬಿಜೆಪಿಯವರದ್ದೇ ಸರಕಾರವಿತ್ತು. ಅವರ ಪಕ್ಷದವರೇ ಅವರ ಬೆನ್ನಿಗೆ ಚೂರಿ ಹಾಕಿ ಜೈಲಿಗೆ ಕಳಿಸಿದ್ದಾರೆ. ಇದು ಆ ರೀತಿಯ ಪ್ರಕರಣವಲ್ಲ. ಈ ಪ್ರಕರಣದ ಕುರಿತು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ರಾಜಕೀಯವಾಗಿ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. 40 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದವರು ಸಿದ್ದರಾಮಯ್ಯನವರು. ಅವರ ಮುಖಕಕ್ಕೆ ಮಸಿ ಬಳಿಯಲು ಹೋದವರ ಕೈಗೆ ಮೊದಲು ಮಸಿ ಬಳಿದಿದೆ. ಜನರು ಅವರನ್ನು ಕ್ಷಮಿಸುವುದಿಲ್ಲ. ಈ ರಾಜ್ಯದ ಜನರು 5 ವರ್ಷ ಸುಭದ್ರ ಆಡಳಿತ ನಡೆಸಲು ಆಶಿರ್ವಾದ ಮಾಡಿದ್ದಾರೆ.  ನಾವು 5 ವರ್ಷ ಆಡಳಿತ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ