ಅವರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು. ತನಿಖಾ ಸಂಸ್ಥೆಯ ಮೂಲಗಳು ಎಎನ್ಐಗೆ ತಿಳಿಸಿರುವಂತೆ ಡಾ. ಮುಜಮ್ಮಿಲ್, ಡಾ. ಅದೀಲ್, ಉಮರ್ ಮತ್ತು ಶಾಹೀನ್ ಜಂಟಿಯಾಗಿ ಸುಮಾರು 20 ಲಕ್ಷ ರೂ. ನಗದನ್ನು ಸಂಗ್ರಹಿಸಿದ್ದು, ದೆಹಲಿ ಸ್ಫೋಟದ ಮೊದಲು ಅದನ್ನು ಉಮರ್ಗೆ ಹಸ್ತಾಂತರಿಸಲಾಗಿತ್ತು.
ನಂತರ ಅವರು ಗುರುಗ್ರಾಮ, ನೂಹ್ ಮತ್ತು ಹತ್ತಿರದ ಪ್ರದೇಶಗಳಿಂದ ಐಇಡಿ ತಯಾರಿಕೆಗಾಗಿ ಉದ್ದೇಶಿಸಲಾದ 3 ಲಕ್ಷ ರೂ. ಮೌಲ್ಯದ 20 ಕ್ವಿಂಟಾಲ್ಗೂ ಹೆಚ್ಚು ಎನ್ಪಿಕೆ ರಸಗೊಬ್ಬರವನ್ನು ಖರೀದಿಸಿದ್ದರು ಎಂದು ಮೂಲಗಳು ತಿಳಿಸಿವೆ.