LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ; ಮೋದಿ ಜೊತೆ ಡಿಪ್ಪಿ, ಸದ್ಗುರು ಭಾಗಿ

ಪರೀಕ್ಷೆಯ ಒತ್ತಡವನ್ನು ನಿವಾರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳೊಂದಿಗೆ ನಡೆಸುವ ವಾರ್ಷಿಕ ಸಂವಾದ ‘ಪರೀಕ್ಷಾ ಪೆ ಚರ್ಚಾ’ಗೆ ಈ ಬಾರಿ ಹೊಸ ಆಯಾಮ ದೊರೆತಿದೆ. ಪ್ರಧಾನಿ ಮೋದಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಲಿದ್ದು, ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ಸಲಹೆ ನೀಡಲಿದ್ದಾರೆ. ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ಫೆಬ್ರವರಿ 10ರಂದು ನವದೆಹಲಿಯಲ್ಲಿರುವ ಭಾರತ್ ಮಂಟಪದಲ್ಲಿ ನಡೆಯುತ್ತಿದೆ. ಈ ಮೊದಲು ಕೇವಲ ಪ್ರಧಾನಿಯೊಂದಿಗೆ ಮಾತ್ರ ಸಂವಾದ ನಡೆಯುತ್ತಿತ್ತು ಆದರೆ ಈಗ ಸೆಲೆಬ್ರಿಟಿಗಳು ಕೂಡ ಇದರ ಭಾಗವಾಗಿರಲಿದ್ದಾರೆ.



ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ.




ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50-60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಿಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್