Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೋಮಸಮುದ್ರದ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆಗೆ ಟಿ. ಎಚ್. ಎಂ. ಬಸವರಾಜ್ ಮನವಿ


ಬಳ್ಳಾರಿ: 15..ಸಿರುಗುಪ್ಪ ರಸ್ತೆಯ ಸೋಮಸಮುದ್ರ ಗ್ರಾಮದ ಐತಿಹಾಸಿಕ ದೇವಾಲಯಗಳು, ಶಾಸನಗಳು ಹಾಗೂ ಶಿಲ್ಪಕಲಾ ನಿದರ್ಶನಗಳ ಸಂರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಇತಿಹಾಸ ಅಧ್ಯಯನ ತಂಡ ಮನವಿ ಮಾಡಿದೆ.


ಕರ್ನಾಟಕ ಇತಿಹಾಸ ಅಕಾಡೆಮಿಯ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾದ ಟಿ. ಎಚ್. ಎಂ. ಬಸವರಾಜ್ ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಡಾ. ಎಚ್. ತಿಪ್ಪೇಸ್ವಾಮಿ, ಡಾ. ಗೋವಿಂದ್ ಮತ್ತು ಡಾ. ರಮೇಶ್ ಕುಂಬಾರ ಅವರ ನೇತೃತ್ವದ ಇತಿಹಾಸ ಅಧ್ಯಯನ ತಂಡವು ಇತ್ತೀಚೆಗೆ ಸೋಮಸಮುದ್ರ ಗ್ರಾಮಕ್ಕೆ ಭೇಟಿ ನೀಡಿ ಪ್ರಾಚೀನ ದೇವಾಲಯಗಳು, ಬಾವಿ, ಶಿಲ್ಪಗಳು, ಮೂರ್ತಿಗಳು ಮತ್ತು ಶಾಸನಗಳ ಪರಿಶೀಲನೆ ನಡೆಸಿತು.


ಅಧ್ಯಯನದ ವೇಳೆ ಬಿಳೇ ಬಂಡೆ ಬಸವಣ್ಣ ದೇವಾಲಯದ ಹತ್ತಿರದ ಅಪ್ರಕಟಿತ ಶಾಸನವೊಂದನ್ನು ಪತ್ತೆಹಚ್ಚಲಾಗಿದೆ. ಅಲ್ಲದೆ, ಗ್ರಾಮದಲ್ಲಿರುವ ಕಾಶಿ ವಿಶ್ವೇಶ್ವರ ಮತ್ತು ನರಸಿಂಹ ದೇವಾಲಯಗಳು ಹಾಗೂ ನಂದಿ ವಿಗ್ರಹಗಳು ಶಿಲ್ಪಕಲೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಇವುಗಳನ್ನು ಕುರುಗೋಡು ಸಿಂಧರ ರಾಜನಾದ ಎರಡನೇ ರಾಚಮಲ್ಲ ತಮ್ಮ ಕಾಲದಲ್ಲಿ ನಿರ್ಮಿಸಿದ್ದರೆಂದು ಶಾಸನಗಳು ಸೂಚಿಸುತ್ತವೆ.


ಮುಂದಿನ ವಿಜಯನಗರ ಕಾಲದಲ್ಲಿ ದೊರೆಗಳು ಈ ದೇವಾಲಯಗಳಿಗೆ ಅನೇಕ ದಾನ-ದತ್ತಿಗಳನ್ನು ನೀಡಿ ಪ್ರೋತ್ಸಾಹಿಸಿರುವುದಾಗಿ ಅಧ್ಯಯನದಿಂದ ತಿಳಿದುಬಂದಿದೆ. ಆದರೆ, ಈ ಸ್ಮಾರಕಗಳು ಹಾಗೂ ಪುಷ್ಕರಣಿಗಳು ಈಗ ಅವನತಿ ಹೊಂದಿರುವುದರಿಂದ, ಅವುಗಳ ತುರ್ತು ಸಂರಕ್ಷಣೆ ಅಗತ್ಯವೆಂದು ಅಧ್ಯಯನ ತಂಡ ಶಿಫಾರಸು ಮಾಡಿದೆ.


ಇತಿಹಾಸ ಅಕಾಡೆಮಿಯ ಜಿಲ್ಲಾಧ್ಯಕ್ಷ ಟಿ. ಎಚ್. ಎಂ. ಬಸವರಾಜ್ ಅವರು ಸಂಬಂಧಿತ ಇಲಾಖೆಗಳು ಶೀಘ್ರ ಕ್ರಮ ಕೈಗೊಂಡು ಈ ಅಮೂಲ್ಯ ಪಾರಂಪರಿಕ ಸ್ಮಾರಕಗಳನ್ನು ಉಳಿಸಬೇಕು ಎಂದು ಮನವಿ ಮಾಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ