
ಪ್ರತಿ ನಿತ್ಯ ಶಿಸ್ತಿನಿಂದ ಐದು ಗಂಟೆಗೆ ಬಂದು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು, ಸ್ವಚ್ಛತಾ ಕಾರ್ಯ ಮುಗಿದ ಮೇಲೆ ಧ್ಯಾನ, ಭಜನ್ ಹಾಗೂ ಗಾಂಧಿ ಚಿಂತನ ಮಾಡಿ ಗಾಂಧಿ ಬಳಗ ಕೊಪ್ಪಳ ಸದಸ್ಯರು ನಿರ್ಗಮಿಸುತ್ತಿದ್ದರು.
ಮೂರು ದಿನಗಳ ಗಾಂಧಿ ಚಿಂತನವನ್ನು ಕ್ರಮವಾಗಿ ನಾಗರಾಜನಾಯಕ ಡಿ.ಡೊಳ್ಳಿನ, ವಿರೇಶ ಮೇಟಿ, ಡಾ.ಪ್ರಭುರಾಜನಾಯಕ ಮಾಡಿದರೆ ನಿರೂಪಣೆಯನ್ನು ಪ್ರಕಾಶಗೌಡ, ಪ್ರಾಣೇಶ ಪೂಜಾರ, ಶಿವಪ್ಪ ಜೋಗಿ ಮಾಡಿದರು.
ಮೂರು ದಿನಗಳ ಸ್ವಚ್ಛತಾ ಕಾರ್ಯದಲ್ಲಿ ಶರಣಪ್ಪ ಬಾಚಲಾಪುರ, ಆನಂದತೀರ್ಥ ಪ್ಯಾಟಿ, ಬಸವರಾಜ ಸವಡಿ, ಮಲ್ಲಪ್ಪ ಹವಳೆ, ಗುರುಸ್ವಾಮಿ, ಹೊಳಿಬಸಯ್ಯ, ವಿರೇಶ ಕೌಂಟಿ, ಅಂದಪ್ಪ ಬೋಳರೆಡ್ಡಿ, ಸತೀಶ ದನಗಳದೊಡ್ಡಿ, ಮಂಜುನಾಥ ಕುದುರಿ,ಗುರುರಾಜ, ಶರೀಫ್, ಶ್ರೀಪತಿ ವೀರಭದ್ರಪ್ಪ, ಮತ್ತಿತ್ತರರು ಹಾಜರಿದ್ದರು.