Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: 

ಮುಂದಿನ ಕೆಲ ದಿನಗಳು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್: 

ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆಯ ಆರ್ಭಟ ಜೋರಾಗಲಿದೆ. ಚಿಕ್ಕಮಗಳೂರು ಜಿಲ್ಲೆಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಸುರಕ್ಷಿತವಾಗಿರುವಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಮಳೆ? 

ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ವೇಗವಾದ ಗಾಳಿಯೊಂದಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಜೂನ್ 19ರ ವರೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದಲ್ಲಿ ಸಾಧಾರಣ ಮಳೆ ನಿರೀಕ್ಷೆ: 

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ:

ಬೆಂಗಳೂರಿನಲ್ಲಿಂದು ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ವೇಳೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಗರಿಷ್ಠ ತಾಪಮಾನ 33-34 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23-24 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮಳೆ ಅಬ್ಬರ: 

ಕಳೆದ ಎರಡು ಮೂರು ದಿನಗಳಿಂದ ರಾಜ್ಯದ ಹಲವೆಡೆ ಮಳೆ ಆಗುತ್ತಿದೆ. ಮೈಸೂರ, ಹಾವೇರಿ, ಚಿಕ್ಕಮಗಳೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ಹಲೆವೆಡೆ ವರುಣ ಅಬ್ಬರಿಸಿದ್ದಾನೆ. ಮೈಸೂರು ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಓರ್ವ ಮಹಿಳೆ ಮತ್ತು ಎರಡು ಹಸುಗಳು ಸಾವನ್ನಪ್ಪಿವೆ. ಇನ್ನು ಬಳ್ಳಾರಿ ಜಿಲ್ಲೆಯಲ್ಲೂ ಸಹ ಸಿಡಿಲಿಗೆ ಓರ್ವ ಬಲಿಯಾಗಿರುವ ಘಟನೆ ಶನಿವಾರ ನಡೆದಿದೆ.

ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಅಪಾರ ಬೆಳೆ ಹಾನಿಯಾಗಿದೆ. ಹಲವೆಡೆ ಮನೆಗಳು ಜಖಂಗೊಂಡಿವೆ. ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ಅಸ್ತವ್ಯಸ್ತ ಉಂಟಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ 6 ಜನ ದ್ವಿಚಕ್ರ ವಾಹನ ಕಳ್ಳರ ಬಂಧನಐನಾಪುರದಲ್ಲಿ ೧೧೦ ಕೆವಿ ಸ್ಟೇಶನ್ ನಿರ್ಮಾಣಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿಕೆಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಭಿಮತಸಿಐಡಿ ತನಿಖೆಯಿಂದ,  ಶಿವಂ ಅಸೋಸಿಯೇಟ್ಸ್ ಹಗರಣ  ವಂಚನೆ ಸ್ಪಷ್ಟ ಮಾಹಿತಿ ; ಸಚಿವ ಸತೀಶ್‌ ಜಾರಕಿಹೊಳಿಕಾರ್ಯಕರ್ತರಲ್ಲಿ ವ್ಯಕ್ತಿತ್ವ, ಶಿಸ್ತು ರೂಪಿಸುವಲ್ಲಿ ಪ್ರಶಿಕ್ಷಣವರ್ಗ ಸಹಕಾರಿ :ಜಗದೀಶ ಶೆಟ್ಟರಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಪುಸ್ತಕಗಳ ವಿತರಣೆಗೆ ಸಕಲ ಸಿದ್ಧತೆ - ಬಿಇಓ ಬಸಣ್ಣವರನೀಟ್‌ ರದ್ದತಿಗೆ ನೊಂದು ಬೆಂಗಳೂರಿಗ ಸೇರಿ 4 ವಿದ್ಯಾರ್ಥಿಗಳು ಸಾವಿಗೆ ಶರಣು!ಕೊಳವೆಬಾವಿ ದುರಂತ: ಮೊಮ್ಮಗನ ರಕ್ಷಣೆಗೆ ಹೋದ ಅಜ್ಜ ಸಾವುಭಾರಿ ಗಾತ್ರದ ಕಾಡುಕೋಣ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ