Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ವಿಶ್ವವಿಖ್ಯಾತ 'ಪುರಿ ಜಗನ್ನಾಥ'ನ ರಥೋತ್ಸವದ 'ಬಹುದ ಯಾತ್ರೆ'

ಪುರಿ, ಒಡಿಶಾ: ವಿಶ್ವವಿಖ್ಯಾತ 'ಪುರಿ ಜಗನ್ನಾಥ'ನ ರಥೋತ್ಸವದ 'ಬಹುದ ಯಾತ್ರೆ' ಇಂದು ಭಗವಂತನ ಶ್ರೀ ಮಂದಿರ ತಲುಪಲಿದೆ. ದೇವಾಲಯಕ್ಕೆ ಮೊದಲು ಭಗವಾನ್​​ ಜಗನ್ನಾಥರ ಒಡಹುಟ್ಟಿದವರಾದ ಬಲಭದ್ರ ದೇವರು, ಬಳಿಕ ಸಹೋದರಿ ದೇವಿ ಸುಭದ್ರಾ, ಕೊನೆಯಲ್ಲಿ ಜಗನ್ನಾಥ ದೇವರು ಆಗಮಿಸಲಿದ್ದಾರೆ. ಒಂಬತ್ತು ದಿನಗಳ ಕಾಲ ಗುಂಡಿಚಾ ದೇವಸ್ಥಾನದಲ್ಲಿ ನೆಲೆಸಿದ್ದ ದೇವರುಗಳನ್ನು ಭಕ್ತರು ಇಂದು ಭವ್ಯ ಮೆರವಣಿಗೆಯಲ್ಲಿ ದೇವರ ರಥವನ್ನು ಎಳೆಯಲಿದ್ದಾರೆ.


ಸಂಪ್ರದಾಯದ ಪ್ರಕಾರವೇ ಗುಂಡಿಚಾ ದೇವಸ್ಥಾನದಲ್ಲಿ ಎಲ್ಲ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ದೇವತೆಗಳ 'ಪಹಂಡಿ' ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ. ಸಂಜೆ 4 ಗಂಟೆಗೆ ರಥೋತ್ಸವ ನಡೆಯಲಿದೆ. ರಥ ಎಳೆಯುವ ಕಾರ್ಯ ಮುಗಿದ ನಂತರ ರಥದ ಮೇಲಿರುವ ಇತರ ಧಾರ್ಮಿಕ ವಿಧಿ ವಿಧಾನಗಳು ನಡೆಯಲಿವೆ. ಶ್ರೀ ಜಗನ್ನಾಥ ದೇವಸ್ಥಾನದ ಆಡಳಿತ (SJTA) ಪ್ರಕಾರ, ಎಲ್ಲ ಧಾರ್ಮಿಕ ಕ್ರಿಯೆಗಳನ್ನು ಸುಗಮವಾಗಿ ಮತ್ತು ಶಿಸ್ತುಬದ್ಧವಾಗಿ ನಡೆಸಲು ವಿಸ್ತಾರವಾದ ಸಿದ್ಧತೆಗಳನ್ನು ಮಾಡಲಾಗಿದೆ. ಆಡಳಿತವು ಸಕಾಲದಲ್ಲಿ ಆಚರಣೆಗೆ ಒತ್ತು ನೀಡುತ್ತಿದೆ.


ಪುರಿ ಜಗನ್ನಾಥ ದೇವಸ್ಥಾನದ ರತ್ನ ಭಂಡಾರದ ಬಾಗಿಲ ಬರೋಬ್ಬರಿ 46 ವರ್ಷಗಳ ಬಳಿಕ ನಿನ್ನೆ ತೆರೆಯಲಾಯಿತು. ಪೂಜೆ ಸಲ್ಲಿಸಿದ ಬಳಿಕ ಭಾನುವಾರ ಮಧ್ಯಾಹ್ನ 1.28ಕ್ಕೆ ಆ ರಹಸ್ಯ ಕೊಠಡಿಯ ಬಾಗಿಲು ಓಪನ್ ಮಾಡಲಾಗಿದೆ.

1978 ರಲ್ಲಿ ಕೊನೆಯದಾಗಿ ರತ್ನ ಭಂಡಾರದ ಬಾಗಿಲನ್ನು ತೆರೆಯಲಾಗಿತ್ತು. ಜುಲೈ 7 ಮತ್ತು 8 ರಂದು ಪುರಿಯಲ್ಲಿ ಜಗನ್ನಾಥ ದೇವರ ಮಹಾರಥೋತ್ಸವ ನಡೆದಿದೆ. ಪ್ರತಿ ಬಾರಿ 1 ದಿನವಿದ್ದ ಜಾತ್ರೆ ಈ ಬಾರಿ 2 ದಿನ ನಡೆಸಲಾಗಿದೆ. ಈ ಭವ್ಯ ರಥಯಾತ್ರೆಗೆ ದೇಶ-ವಿದೇಶದಿಂದ ಭಕ್ತರು ಸೇರಿದ್ದರು. ಈ ಬಾರಿ ಜಾತ್ರೆಯ ಮೊದಲ ದಿನ ಭಾನುವಾರದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಧಾನ ಜಗನ್ನಾಥ ರಥದ ಹಗ್ಗಗಳನ್ನು ಎಳೆಯುವ ಮೂಲಕ ಸಾಂಕೇತಿಕವಾಗಿ ಮಹಾ ಯಾತ್ರೆಗೆ ಚಾಲನೆ ನೀಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ