ಈ ಕುರಿತು ಬೆಂಗಳೂರು ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್ ಮುಖಾಂತರ ತಿಳಿಸಿದ್ದಾರೆ. ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ (ಬಿಎಂಆರ್ಸಿಎಲ್) ವತಿಯಿಂದ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸೋಮವಾರ (ನ.11) ರಿಂದ 30 ದಿನಗಳ ಕಾಲ ಈ ಕೆಳಗಿನ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ: ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಬರುವ ಬಿಎಂಟಿಸಿ ಬಸ್ ಮತ್ತು ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.
ಶಿವಾಜಿ ರಸ್ತೆಯ ಮೂಲಕ ಶಿವಾಜಿ ಸರ್ಕಲ್ ಕಡೆಯಿಂದ ಜೋತಿ ಕೆಫೆ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಕಡೆಗೆ ಬರುವ ಎಲ್ಲಾ ಮಾದರಿಯ ವಾಹನಗಳಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ.