ಬಾಗಲಕೋಟೆ, ಜೂನ್ ೨೯ : ಬಾಗಲಕೋಟೆ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಚತುಷ್ಪತ ರಸ್ತೆಯ ಬಳಿ ಸಂಚಾರ ಸುರಕ್ಷತೆ ದೃಷ್ಠಿಯಿಂದ ಅಪಘಾತ ತಡೆಗೋಡೆ (ಕ್ರ್ಯಾಶ್ ಬಾರಿಯರ್) ದುರಸ್ಥಿ ಕಾರ್ಯ ಮಾಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ವಿಜಯ ಪಾಟೀಲ ತಿಳಿಸಿದ್ದಾರೆ.
ಸಂಚಾರ ಹೆಚ್ಚಿರುವ ಈ ಪ್ರದೇಶದಲ್ಲಿ ಕ್ರ್ಯಾಶ್ ಬಾರಿಯರ್ ಹಾನಿಗೊಳಗಾಗಿದ್ದರಿಂದ ಅಪಘಾತ ಸಂಭವಿಸುತ್ತಿದ್ದವು. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಸಂಗಪ್ಪ ಅವರು ಸೂಚನೆ ನೀಡಿದ್ದರು. ಈ ನಿಟ್ಟಿನಲ್ಲಿ ತುರ್ತಾಗಿ ದುರಸ್ಥಿ ಮಾಡಲಾಗಿದೆ. ಇದರಿಂದ ವಾಹನ ಸವಾರರಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಿದ್ದು, ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ ಎಚ್ಚರಿಕೆಯಿಂದ ವಾಹನ ಚಾಲನೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
