LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾಗೆ ಟ್ರಂಪ್‌ ಅವಮಾನ; ಎಲ್ಲೆಡೆ ಟೀಕೆ

ಅಮೆರಿಕ : ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ವಿದೇಶಿ ಗಣ್ಯರನ್ನು ಓವಲ್ ಕಚೇರಿಗೆ ಕರೆಸಿಕೊಂಡು ಪದೇ ಪದೇ ಅವಮಾನ ಮಾಡುತ್ತಿದ್ದು, ಎಲ್ಲೆಡೆಯಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.


ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರು ಟ್ರಂಪ್ ಅವರೊಂದಿಗೆ ಸೌಹಾರ್ದ ಮಾತುಕತೆಗಾಗಿ ಶ್ವೇತಭವನಕ್ಕೆ ಆಗಮಿಸಿದ್ದರು. ಸಭೆ ಪ್ರಾರಂಭವಾಗಿ 20 ನಿಮಿಷಗಳ ಬಳಿಕ ಟ್ರಂಪ್ ಕೋಣೆಯ ದೀಪಗಳನ್ನು ಮಂದಗೊಳಿಸಿದರು. ದೊಡ್ಡ ಪರದೆಯನ್ನು ಆನ್ ಮಾಡಿದ್ದರು. ರಾಮಫೋಸಾ ಒಮ್ಮೆ ಆಘಾತಕ್ಕೊಳಗಾದರು.

ದಕ್ಷಿಣ ಆಫ್ರಿಕಾದ ವಿರೋಧ ಪಕ್ಷದ ನಾಯಕರಾದ ಜಾಕೋಬ್ ಜುಮಾ ಮತ್ತು ಜೂಲಿಯಸ್ ಮಲೆಮಾ ಅವರು ಪ್ರಚೋದನಕಾರಿ ಭಾಷಣವನ್ನು ಪರದೆಯ ಮೇಲೆ ತೋರಿಸಲಾಯಿತು.ಹಾಗೆಯೇ ಟ್ರಂಪ್ ಕೆಲವು ಡ್ರೋನ್ ದೃಶ್ಯಾವಳಿಗಳನ್ನು ತೋರಿಸಿ ಇದು ಅಲ್ಲಿ ನಡೆದ ಬಿಳಿಯರ ಸಮಾಧಿ ಎಂದರು. ದಕ್ಷಿಣ ಆಫ್ರಿಕಾದಲ್ಲಿ ಬಿಳಿಯರ ನರಮೇಧ ಏಕೆ ನಡೆಯುತ್ತಿದೆ ಎಂದು ಪ್ರಶ್ನಿಸಿದರು.

ರಾಮಫೋಸಾ ತಾಳ್ಮೆಯ ಪ್ರತಿಕ್ರಿಯೆ ಟ್ರಂಪ್​ಗೆ ರಾಮಫೋಸಾ ತಾಳ್ಮೆಯಿಂದ ಉತ್ತರಿಸಿದರು. ಈ ಘೋಷಣೆಗಳು ಸರ್ಕಾರಿ ನೀತಿಯ ಭಾಗವಾಗಿಲ್ಲ, ದಕ್ಷಿಣ ಆಫ್ರಿಕಾವು ಬಹು-ಪಕ್ಷ ಪ್ರಜಾಪ್ರಭುತ್ವವನ್ನು ಹೊಂದಿದ್ದು, ಅಲ್ಲಿ ಜನರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಬಹುದು. ಮಲೆನಾ ಅವರ ಪಕ್ಷ ಚಿಕ್ಕದಾಗಿದ್ದು, ಅವರ ಮಾತುಗಳು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದರು. ಆದರೂ ಟ್ರಂಪ್ ಮಾತು ಮುಂದುವರೆಸಿದರು. ಇದರ ನಡುವೆ ನಿಮಗೆ ಕೊಡಲು ನನ್ನ ಬಳಿ ವಿಮಾನ ಇದ್ದಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ರಾಮಫೋಸಾ ವ್ಯಂಗ್ಯವಾಡಿದ್ದಾರೆ.ಅದಕ್ಕೆ ಕೂಡಲೇ ಉತ್ತರಿಸಿದ ಟ್ರಂಪ್ ನಿಮ್ಮ ದೇಶ ನನಗೆ ವಿಮಾನ ನೀಡಿದರೆ ಅದನ್ನೂ ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ