Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರಿಂದ ಮಕ್ಕಳಿಗೆ ನಿರಂತರ ಮಾರ್ಗದರ್ಶನ ಅಗತ್ಯ-ಟಿ ಎಸ್ ಆಲಗೂರ

ಇಂಡಿ: ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಎಸ್ ಡಿ ಶರ್ಮಾ ಅವರ ಪಾತ್ರ ಅಪಾರವಾಗಿದ್ದು, ಪ್ರಾಮಾಣಿಕವಾಗಿ ಶಾಲೆಗಳ ಅಭಿವೃದ್ಧಿ ಮಾಡುತ್ತಾ, ಜನಾನುರಾಗಿ ಮುಖ್ಯ ಶಿಕ್ಷಕರಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ ಹೇಳಿದರು.

       ಗುರುವಾರದಂದು ತಾಲೂಕಿನ ಬಂಥನಾಳ ಗ್ರಾಮದ ಕೆ ಬಿ ಎಚ್ ಪಿ ಎಸ್ ಶಾಲೆಯಲ್ಲಿ ಹಮ್ಮಿಕೊಂಡ 'ನಿವೃತ್ತ ಮುಖ್ಯ ಶಿಕ್ಷಕ ಎಸ್ ಡಿ ಶರ್ಮಾ ಅವರ ಅಭಿನಂದನಾ ಸಮಾರಂಭ' ವನ್ನು ಉದ್ಧೇಶಿಸಿ ಮಾತನಾಡಿದರು.

        ಈ ಶಾಲೆಯಲ್ಲಿ 10 ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಮಾಡಿದ ಅವರ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಮಕ್ಕಳಿಗೆ ನಿರಂತರ ಮಾರ್ಗದರ್ಶನ ಮಾಡುತ್ತಾ, ತಮ್ಮ ನಿವೃತ್ತಿ ಜೀವನವನ್ನು ಸಾರ್ಥಕಮಾಡಿಕೊಳ್ಳಬೇಕು ಎಂದು ಹೇಳಿದರು.

     ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಮಾತನಾಡಿ, ಸುದೀರ್ಘ 40 ವರ್ಷಗಳ ಸೇವೆಯಲ್ಲಿ ಮಕ್ಕಳ ಉತ್ತಮ ಕಲಿಕೆಗಾಗಿ ಎಸ್ ಡಿ ಶರ್ಮಾ ಅವರು ಸದಾ ಪ್ರೇರಣೆ ನೀಡುತ್ತಿದ್ದರು. ಅವರ ಅನುಭವಿಕ ಮಾರ್ಗದರ್ಶನ ಎಲ್ಲರಿಗೂ ಸಿಗಲಿ ಎಂದು ಹೇಳಿದರು.

        ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ ಟಿ ಪಾಟೀಲ, ತಾಂಬಾ ಗ್ರಾಮ ಪಂಚಾಯಿತಿ ಅಧ್ಯಕ್ಷ  ರಜಾಕ ಚಿಕ್ಕಗಸಿ,ಉಪಾಧ್ಯಕ್ಷ ರವೀಂದ್ರ ನಡಗಡ್ಡಿ, ಗ್ರಾಮದ ಗಣ್ಯರಾದ ಶರಣಪ್ಪ ಜಾಲವಾದಿ, ಸಿದ್ದನಗೌಡ ಪಾಟೀಲ, ಅಶೋಕಗೌಡ ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಎಂ ಎಂ ವಾಲೀಕಾರ, ಬೆಳಗಾವಿ ವಿಭಾಗ ಮಟ್ಟದ ಉಪಾಧ್ಯಕ್ಷ ಎಸ್ ವಿ ಹರಳಯ್ಯ, ಇಂಡಿ ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಭುಲಿಂಗ ಚಾಂದಕವಟೆ, ಎನ್‌ಜಿಓ ಸದಸ್ಯ ಎಸ್ ಡಿ ಪಾಟೀಲ, ಶಿಕ್ಷಕ ಎಸ್ ಆರ್ ಪಾಟೀಲ, ಎಸ್ ಸಿ,ಎಸ್ ಟಿ ನೌಕರರ ಸಂಘದ ಅಧ್ಯಕ್ಷ ಭೀಮರಾಯ ವಠಾರ,ಶಿಕ್ಷಣ ಸಂಯೋಜಕ ಪ್ರಕಾಶ ನಾಯಕ, ಬಿ ಆರ್ ಪಿ ಗಳಾದ ಅಶೋಕ ರಾಠೋಡ, ಎ ಜಿ ಚೌಧರಿ, ಬಸವರಾಜ ಗೊರನಾಳ, ಕಚೇರಿ ಅಧೀಕ್ಷಕ ಎಸ್ ಸಿ ಗೌಡರ, ತಾಂಬಾ ಕ್ಲಸ್ಟರ್ ಸಿ ಆರ್ ಪಿ ಶರಣು ಕ್ಯಾತಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.

        ನಿವೃತ್ತ ಮುಖ್ಯ ಶಿಕ್ಷಕ ಎಸ್ ಡಿ ಶರ್ಮಾ ಹಾಗೂ ಅವರ ಪತ್ನಿ ಶಶಿಕಲಾ ಶರ್ಮಾ ಅವರನ್ನು ಶಾಲಾ ಎಸ್ ಡಿ ಎಂ ಸಿ, ಗ್ರಾಮಸ್ಥರು, ಕುಟುಂಬ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

        ಶಿಕ್ಷಕ ಈರಣ್ಣ ಕಂಬಾರ ಸ್ವಾಗತಿಸಿದರು.ಬಿ ಎಸ್  ಗಂಡೋಳಿ ನಿರೂಪಿಸಿದರು.ಆರ್ ಎಸ್ ಸಫಲಿ ವಂದಿಸಿದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ