Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರ ಜಲಾಶಯದಲ್ಲಿ ಹೂಳ ತೆರವಿಗೆ ತುಂಗಭದ್ರ ರೈತ ಸಂಘ ಒತ್ತಾಯ


ಬಳ್ಳಾರಿ,ಅ.18..: ತುಂಗಭದ್ರ ಜಲಾಶಯದಲ್ಲಿ ಶೇಖರಣೆಯಾಗಿರುವ ಹೂಳನ್ನು (ಮಣ್ಣನ್ನು) ತೆಗೆಯಬೇಕೆಂದು ತುಂಗಭದ್ರ ರೈತ ಸಂಘ ಒತ್ತಾಯಿಸಿದೆ.

ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಸಚಿವೆ ನಿರ್ಮಲಾ ಸೀತಾರಾಮನ್‌ರವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಳ್ಳಾರಿ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಮನವಿ ಪತ್ರ ಸಲ್ಲಿಸಿರುವ ತುಂಗಭದ್ರಾ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ, ಪ್ರಗತಿಪರ ರೈತರು ಹಾಗೂ ರೈತ ಪರ ಹಿರಿಯ ಹೋರಾಟಗಾರ ಡಾ||ದರೂರು ಪುರುಷೋತ್ತಮಗೌಡ ಮತ್ತು ಸಂಘದ ಪದಾಧಿಕಾರಿಗಳು, ತುಂಗಭದ್ರ ಜಲಾಶಯವನ್ನು ಅಂದಿನ ಮದ್ರಾಸ್ ಮತ್ತು ಹೈದರಾಬಾದ್ ಸರ್ಕಾರಗಳ ವತಿಯಿಂದ ೧೯೪೫ರಲ್ಲಿ ನಿರ್ಮಿಸಲಾಗಿದ್ದು, ೧೯೫೩ರಿಂದ ನೀರಾವರಿಗಾಗಿ ಡ್ಯಾಂನಿAದ ನೀರು ಬಿಡುಗಡೆ ಪ್ರಾರಂಭವಾಯಿತು.

ಈ ಜಲಾಶಯವು ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಇಂದಿನ ೯ ಜಿಲ್ಲೆಗಳ ಲಕ್ಷಾಂತರ ಎಕರೆ ಕೃಷಿ ಹಾಗೂ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವ ಪ್ರಮುಖ ಜಲ ಮೂಲವಾಗಿದೆ. ಈ ಜಲಾಶಯದ ಮೂಲಕ ೧೬ ಲಕ್ಷ ಎಕರೆ ಕೃಷಿ ಭೂಮಿಗೆ ನೀರು ನೀಡಲಾಗುತ್ತಿದ್ದು, ಕರ್ನಾಟಕದ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಮತ್ತು ಆಂಧ್ರಪ್ರದೇಶದ ಕರ್ನೂಲು, ಕಡಪಾ, ಅನಂತಪುರ ಹಾಗೂ ತೆಲಂಗಾಣದ ಗದ್ವಾಲ್, ಮೆಹಬೂಬನಗರ ಜಿಲ್ಲೆಗಳ ಕೃಷಿಗೆ ಮಾತ್ರವಲ್ಲದೆ, ಗ್ರಾಮೀಣ ಮತ್ತು ನಗರ ಜನತೆಗೆ ಕುಡಿಯುವ ನೀರನ್ನೂ ಒದಗಿಸುತ್ತದೆ. ಜೊತೆಗೆ ಕೈಗಾರಿಕೆಗಳಿಗೆ ಸಹ ಸಹಾಯವಾಗುತ್ತಿದೆ.

ಈ ಜಲಾಶಯದ ಮೂಲ ಸಾಮರ್ಥ್ಯ ೧೩೩ ಟಿಎಂಸಿ ಆಗಿದ್ದು, ಈಗ ಹೂಳು ತುಂಬಿರುವುದರಿAದ ಸುಮಾರು ೩೩ ಟಿಎಂಸಿ ನೀರಿನ ಸಾಮರ್ಥ್ಯ ಕಡಿಮೆಯಾಗಿದೆ. ಇದರಿಂದಾಗಿ ಪ್ರಸ್ತುತ ಇರುವುದು ಕೇವಲ ೧೦೦ ಟಿಎಂಸಿ ಮಾತ್ರ. ಇದರ ಪರಿಣಾಮವಾಗಿ ರೈತರಿಗೆ ಕೃಷಿಗಾಗಿ ಅಗತ್ಯವಿರುವ ನೀರು ದೊರಕುತ್ತಿಲ್ಲ. ಕುಡಿಯುವ ನೀರು ಹಾಗೂ ಕೈಗಾರಿಕಾ ಬಳಕೆಗೆ ಸಹ ತೀವ್ರ ಸಮಸ್ಯೆ ಉಂಟಾಗಿದೆ. ಜಿಂದಾಲ್ ಕಾರ್ಖಾನೆಗಳು ೨೦ ವರ್ಷಗಳ ಹಿಂದೆಯೇ ಕೃಷ್ಣಾ ಜಲಾಶಯ (ಅಲಮಟ್ಟಿ)ದಿಂದ ನೀರು ತಂದುಕೊಳ್ಳುವ ಪರಿಸ್ಥಿತಿಯಲ್ಲಿದ್ದವು. ಇದರಿಂದ ರೈತ¬ರಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ತೀವ್ರವಾದ ಸಮಸ್ಯೆಗಳು ಎದುರಾಗಬಹುದಾಗಿದೆ, ಆದ್ದರಿಂದ ಕೇಂದ್ರ ಜಲ ಆಯೋಗದ ಗಮನಕ್ಕೆ ತರುವಂತೆ ಮತ್ತು ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಸಮಾವೇಶವನ್ನು ಕರೆದು, ತುಂಗಭದ್ರ ಜಲಾಶಯದಿಂದ ಹೂಳು ತೆಗೆದುಹಾಕಿ ಡ್ಯಾಂನ ಮೂಲ ಸಾಮ ರ್ಥ್ಯವಾದ ೧೩೩ ಟಿಎಂಸಿಗೆ ಪುನಃ ಪುನರ್‌ಸ್ಥಾಪನೆ ಮಾಡುವಂತೆ ಡಾ||ಪುರುಷೋತ್ತಮಗೌಡ ಮತ್ತಿತರರು ಒತ್ತಾಯಿಸಿದ್ದಾರೆ.

ಈ  ಸÀಂದರ್ಭದಲ್ಲಿ ಮಾಜಿ ಶಾಸಕ ಸೋಮಶೇಖರರೆಡ್ಡಿ, ಬಿಜೆಪಿ ಬಳ್ಳಾರಿ ನಗರ ಘಟಕದ ಅಧ್ಯಕ್ಷ ಗರ‍್ರಂ ವೆಂಕಟರಮಣ ಸೇರಿದಂತೆ ಇನ್ನಿತರರು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಗೆ ಮನವಿ ಮಾಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ