Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಾಹಿತ ಮಹಿಳೆ ಮತಾಂತರಕ್ಕೆ ಯತ್ನ: ದಂಪತಿ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್

ಬೆಳಗಾವಿ,ಏಪ್ರಿಲ್​ 22: 28ರ ಹರೆಯದ ವಿವಾಹಿತ ಮಹಿಳೆಯ ಅಶ್ಲೀಲ ಫೋಟೋ ಹಾಗೂ ವೀಡಿಯೊಗಳನ್ನು ವೈರಲ್‌ ಮಾಡುವುದಾಗಿ ಬೆದರಿಸಿ ಬ್ಲಾಕ್ ಮೇಲ್ ಮೂಲಕ ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯಿಸಿದ ಆರೋಪದಲ್ಲಿ ದಂಪತಿ ಸೇರಿದಂತೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ್ದ ಆರೋಪದ ಮೇರೆಗೆ ರಫೀಕ್ ಬೇಪಾರಿ ಹಾಗೂ ಆತನ ಪತ್ನಿ ಕೌಸರ್ ಬೇಪಾರಿ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಕಿರಾಣಿ ಅಂಗಡಿ ನಡೆಸುತ್ತಿದ್ದ ಮಹಿಳೆಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಂಡು, ನಂತರ ಅಶ್ಲೀಲ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮತಾಂತರಕ್ಕೆ ಒತ್ತಾಯಿಸಲಾಗಿದೆ. ಮಹಿಳೆಯ ಖಾಸಗಿ ಕ್ಷಣದ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮತಾಂತರಕ್ಕೆ ಯತ್ನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಸಂತ್ರಸ್ತ ಮಹಿಳೆ ಒಟ್ಟು 7 ಜನರ ವಿರುದ್ಧ ಮತಾಂತರ ಯತ್ನದ ಆರೋಪ‌ ಮಾಡಿದ್ದು, ಸವದತ್ತಿ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾಳೆ. ಮಹಿಳೆ ದೂರಿನನ್ವಯ ಸವದತ್ತಿ ಪೊಲೀಸರು ದಂಪತಿಯನ್ನು ಬಂಧನ ಮಾಡಿದ್ದಾರೆ. ಈ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾ ಶಂಕರ ಗುಳೇದ ಮಾಹಿತಿ ನೀಡಿದ್ದಾರೆ.

ಹಣೆಗೆ ಕುಂಕುಮ ಹಚ್ಚುವುದನ್ನು ನಿಲ್ಲಿಸಬೇಕು. ಹಿಂದೂ ಸಂಪ್ರದಾಯ ಬಿಡಬೇಕು. ನಿತ್ಯ ಬುರ್ಖಾ ಧರಿಸಬೇಕು. ದಿನಕ್ಕೆ 5 ಸಲ ನಮಾಜ್ ಮಾಡಬೇಕು ಎಂದು ರಫೀಕ್‌ ಬೇಪಾರಿ ಷರತ್ತು ಹಾಕಿ ಕಿರುಕುಳ ನೀಡುತ್ತಿದ್ದರು ಎಂದು ಏ.18 ರಂದು ಸವದತ್ತಿ ಠಾಣೆಗೆ ದೂರು ನೀಡಲಾಗಿದೆ.

ಆರೋಪಿಗಳಾದ ಮುನವಳ್ಳಿ ಪಟ್ಟಣದ ಆರೀಫ್ ‌ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ದೂರು ದಾಖಲಾಗಿದೆ. ಈಗ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಮಹಿಳೆ ಗಂಡ ಕಿರಾಣಿ ಅಂಗಡಿ ಹೊಂದಿದ್ದರು. ಪತಿ ಇಲ್ಲದಾಗ ಆಗಾಗ ಕಿರಾಣಿ ಅಂಗಡಿಯಲ್ಲಿ ಈ ಮಹಿಳೆ ಕೂರುತ್ತಿದ್ದಳು. ಆಗ ಆರೀಫ್ ಬೇಪಾರಿ ಅಲ್ಲಿಗೆ ಬರುತ್ತಿದ್ದ ಮಹಿಳೆಯ ಸ್ನೇಹ ಬೆಳೆಸಿ ಮೊಬೈಲ್ ನಂಬರ್‌ ಪಡೆದುಕೊಂಡಿದ್ದ. ನಂತರ, ಹಲವು ಆಮಿಷಗಳನ್ನೊಡ್ಡಿದ್ದ, ನಂತರ ಮಹಿಳೆಗೆ ಬೆಳಗಾವಿಯಲ್ಲಿ ಕೈತುಂಬಾ ಸಂಬಳದ ಆಫೀಸ್‌ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ ‌ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

ಅಶ್ಲೀಲ ದೃಶ್ಯ ವೀಡಿಯೊ ಮಾಡಿಟ್ಟುಕೊಂಡು ಬೆದರಿಸುತ್ತಿದ್ದಾನೆ. ನಂತರ ಆತ ಹಾಗೂ ಇತರ ಐವರು  ನೀನು ಮತಾಂತರಗೊಳ್ಳಬೇಕು. ಇಲ್ಲವಾದಲ್ಲಿ ನಿನ್ನ ಫೋಟೋ ಹಾಗೂ ವೀಡಿಯೊವನ್ನು ಸಾಮಾಜಿಕ ಜಾಲತಾಣಕ್ಕೆ ಹರಿಬಿಡುತ್ತೇನೆ ಎಂದು ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ