Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗ್ರರ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಬಿಷ್ಣುಪುರ್27: ಮಣಿಪುರದ ನರಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಪೊಲೀಸರ ಪ್ರಕಾರ, CRPF ಸಿಬ್ಬಂದಿ ಮೇಲೆ ಕುಕಿ ಉಗ್ರರು ಶುಕ್ರವಾರ ಮಧ್ಯರಾತ್ರಿಯಿಂದ ಆರಂಭಗೊಂಡ 2.15 ರವರೆಗೆ ದಾಳಿ ನಡೆಸಿದರು. ಜೀವ ಕಳೆದುಕೊಂಡ ಸಿಬ್ಬಂದಿ ರಾಜ್ಯದ ಬಿಷ್ಣುಪುರ್ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ನಿಯೋಜಿಸಲಾದ CRPF 128 ಬೆಟಾಲಿಯನ್​ಗೆ ಸೇರಿದ್ದಾರೆ.


ಮಣಿಪುರ ಮುಖ್ಯ ಚುನಾವಣಾ ಅಧಿಕಾರಿ ಪ್ರದೀಪ್ ಕುಮಾರ್ ಝಾ ಮಾತನಾಡಿ, ''ಮಣಿಪುರದಲ್ಲಿ ಶುಕ್ರವಾರ ಹೆಚ್ಚಿನ ಮತದಾನವಾಗಿದೆ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿವೆ. ನಾವು ಸುಮಾರು ಸ್ವೀಕರಿಸಿದ ಕೊನೆಯ ವರದಿ ಪ್ರಕಾರ, ಶೇಕಡಾ 75ರಷ್ಟು ಮತದಾನದ ಆಗಿದೆ" ಎಂದು ಹೇಳಿದರು.


''ಎರಡನೇ ಹಂತದ ಮತದಾನದ ಸಮಯದಲ್ಲಿ ಜನರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ವಿದ್ಯುನ್ಮಾನ ಮತಯಂತ್ರ (ಇವಿಎಂ) ಅಸಮರ್ಪಕ ಕಾರ್ಯದ ಕುರಿತು ಒಂದು ಘಟನೆಯು ಮತಗಟ್ಟೆಯಲ್ಲಿ ವರದಿಯಾಗಿದೆ. ಆದರೆ, ಯಾವುದೇ ಹೆಚ್ಚಿನ ತೊಂದರೆಗಳು ವರದಿಯಾಗಿಲ್ಲ'' ಎಂದರು.


"ಔಟರ್​ ಮಣಿಪುರ ಸಂಸದೀಯ ಕ್ಷೇತ್ರದ ವ್ಯಾಪ್ತಿಯಲ್ಲಿ 13 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಮತದಾನ ಶಾಂತಿಯುತವಾಗಿ ನಡೆದಿದೆ. 2019ರ ಚುನಾವಣೆಗೆ ಹೋಲಿಸಿದರೆ ಔಟರ್​ ಮಣಿಪುರ ಕ್ಷೇತ್ರದಲ್ಲಿ ಮತದಾನವು ಹೆಚ್ಚು ಶಾಂತಿಯುತ ಆಗಿದೆ'' ಎಂದು ಝಾ ತಿಳಿಸಿದರು.


ಭಾರತೀಯ ಚುನಾವಣಾ ಆಯೋಗದ ಮತದಾರರ ಮತದಾನದ ಅಪ್ಲಿಕೇಶನ್‌ನ ಕೊನೆಯ ಅಪ್​ಡೇಟ್​ ಪ್ರಕಾರ, ಶೇಕಡಾ 78.78ರಷ್ಟು ಮತದಾನವಾಗಿದೆ. ಈ ಮೊದಲು, ಏಪ್ರಿಲ್ 19 ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಅನೇಕ ಹಿಂಸಾಚಾರದ ಘಟನೆಗಳು ವರದಿಯಾದ ನಂತರ ಇನ್ನರ್ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22 ರಂದು ಮರು ಮತದಾನ ನಡೆಸಲಾಯಿತು.


 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ