Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗ್ರರ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಬಿಷ್ಣುಪುರ್27: ಮಣಿಪುರದ ನರಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಪೊಲೀಸರ ಪ್ರಕಾರ, CRPF ಸಿಬ್ಬಂದಿ ಮೇಲೆ ಕುಕಿ ಉಗ್ರರು ಶುಕ್ರವಾರ ಮಧ್ಯರಾತ್ರಿಯಿಂದ ಆರಂಭಗೊಂಡ 2.15 ರವರೆಗೆ ದಾಳಿ ನಡೆಸಿದರು. ಜೀವ ಕಳೆದುಕೊಂಡ ಸಿಬ್ಬಂದಿ ರಾಜ್ಯದ ಬಿಷ್ಣುಪುರ್ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ನಿಯೋಜಿಸಲಾದ CRPF 128 ಬೆಟಾಲಿಯನ್​ಗೆ ಸೇರಿದ್ದಾರೆ.


ಮಣಿಪುರ ಮುಖ್ಯ ಚುನಾವಣಾ ಅಧಿಕಾರಿ ಪ್ರದೀಪ್ ಕುಮಾರ್ ಝಾ ಮಾತನಾಡಿ, ''ಮಣಿಪುರದಲ್ಲಿ ಶುಕ್ರವಾರ ಹೆಚ್ಚಿನ ಮತದಾನವಾಗಿದೆ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿವೆ. ನಾವು ಸುಮಾರು ಸ್ವೀಕರಿಸಿದ ಕೊನೆಯ ವರದಿ ಪ್ರಕಾರ, ಶೇಕಡಾ 75ರಷ್ಟು ಮತದಾನದ ಆಗಿದೆ" ಎಂದು ಹೇಳಿದರು.


''ಎರಡನೇ ಹಂತದ ಮತದಾನದ ಸಮಯದಲ್ಲಿ ಜನರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ವಿದ್ಯುನ್ಮಾನ ಮತಯಂತ್ರ (ಇವಿಎಂ) ಅಸಮರ್ಪಕ ಕಾರ್ಯದ ಕುರಿತು ಒಂದು ಘಟನೆಯು ಮತಗಟ್ಟೆಯಲ್ಲಿ ವರದಿಯಾಗಿದೆ. ಆದರೆ, ಯಾವುದೇ ಹೆಚ್ಚಿನ ತೊಂದರೆಗಳು ವರದಿಯಾಗಿಲ್ಲ'' ಎಂದರು.


"ಔಟರ್​ ಮಣಿಪುರ ಸಂಸದೀಯ ಕ್ಷೇತ್ರದ ವ್ಯಾಪ್ತಿಯಲ್ಲಿ 13 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಮತದಾನ ಶಾಂತಿಯುತವಾಗಿ ನಡೆದಿದೆ. 2019ರ ಚುನಾವಣೆಗೆ ಹೋಲಿಸಿದರೆ ಔಟರ್​ ಮಣಿಪುರ ಕ್ಷೇತ್ರದಲ್ಲಿ ಮತದಾನವು ಹೆಚ್ಚು ಶಾಂತಿಯುತ ಆಗಿದೆ'' ಎಂದು ಝಾ ತಿಳಿಸಿದರು.


ಭಾರತೀಯ ಚುನಾವಣಾ ಆಯೋಗದ ಮತದಾರರ ಮತದಾನದ ಅಪ್ಲಿಕೇಶನ್‌ನ ಕೊನೆಯ ಅಪ್​ಡೇಟ್​ ಪ್ರಕಾರ, ಶೇಕಡಾ 78.78ರಷ್ಟು ಮತದಾನವಾಗಿದೆ. ಈ ಮೊದಲು, ಏಪ್ರಿಲ್ 19 ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಅನೇಕ ಹಿಂಸಾಚಾರದ ಘಟನೆಗಳು ವರದಿಯಾದ ನಂತರ ಇನ್ನರ್ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22 ರಂದು ಮರು ಮತದಾನ ನಡೆಸಲಾಯಿತು.


 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ