LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಉಗ್ರರ ದಾಳಿಯಲ್ಲಿ ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಬಿಷ್ಣುಪುರ್27: ಮಣಿಪುರದ ನರಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿ ಕುಕಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಪೊಲೀಸರ ಪ್ರಕಾರ, CRPF ಸಿಬ್ಬಂದಿ ಮೇಲೆ ಕುಕಿ ಉಗ್ರರು ಶುಕ್ರವಾರ ಮಧ್ಯರಾತ್ರಿಯಿಂದ ಆರಂಭಗೊಂಡ 2.15 ರವರೆಗೆ ದಾಳಿ ನಡೆಸಿದರು. ಜೀವ ಕಳೆದುಕೊಂಡ ಸಿಬ್ಬಂದಿ ರಾಜ್ಯದ ಬಿಷ್ಣುಪುರ್ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ನಿಯೋಜಿಸಲಾದ CRPF 128 ಬೆಟಾಲಿಯನ್​ಗೆ ಸೇರಿದ್ದಾರೆ.


ಮಣಿಪುರ ಮುಖ್ಯ ಚುನಾವಣಾ ಅಧಿಕಾರಿ ಪ್ರದೀಪ್ ಕುಮಾರ್ ಝಾ ಮಾತನಾಡಿ, ''ಮಣಿಪುರದಲ್ಲಿ ಶುಕ್ರವಾರ ಹೆಚ್ಚಿನ ಮತದಾನವಾಗಿದೆ. ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದಲ್ಲಿ ಕೆಲವು ಅಹಿತಕರ ಘಟನೆಗಳು ನಡೆದಿವೆ. ನಾವು ಸುಮಾರು ಸ್ವೀಕರಿಸಿದ ಕೊನೆಯ ವರದಿ ಪ್ರಕಾರ, ಶೇಕಡಾ 75ರಷ್ಟು ಮತದಾನದ ಆಗಿದೆ" ಎಂದು ಹೇಳಿದರು.


''ಎರಡನೇ ಹಂತದ ಮತದಾನದ ಸಮಯದಲ್ಲಿ ಜನರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ವಿದ್ಯುನ್ಮಾನ ಮತಯಂತ್ರ (ಇವಿಎಂ) ಅಸಮರ್ಪಕ ಕಾರ್ಯದ ಕುರಿತು ಒಂದು ಘಟನೆಯು ಮತಗಟ್ಟೆಯಲ್ಲಿ ವರದಿಯಾಗಿದೆ. ಆದರೆ, ಯಾವುದೇ ಹೆಚ್ಚಿನ ತೊಂದರೆಗಳು ವರದಿಯಾಗಿಲ್ಲ'' ಎಂದರು.


"ಔಟರ್​ ಮಣಿಪುರ ಸಂಸದೀಯ ಕ್ಷೇತ್ರದ ವ್ಯಾಪ್ತಿಯಲ್ಲಿ 13 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಮತದಾನ ಶಾಂತಿಯುತವಾಗಿ ನಡೆದಿದೆ. 2019ರ ಚುನಾವಣೆಗೆ ಹೋಲಿಸಿದರೆ ಔಟರ್​ ಮಣಿಪುರ ಕ್ಷೇತ್ರದಲ್ಲಿ ಮತದಾನವು ಹೆಚ್ಚು ಶಾಂತಿಯುತ ಆಗಿದೆ'' ಎಂದು ಝಾ ತಿಳಿಸಿದರು.


ಭಾರತೀಯ ಚುನಾವಣಾ ಆಯೋಗದ ಮತದಾರರ ಮತದಾನದ ಅಪ್ಲಿಕೇಶನ್‌ನ ಕೊನೆಯ ಅಪ್​ಡೇಟ್​ ಪ್ರಕಾರ, ಶೇಕಡಾ 78.78ರಷ್ಟು ಮತದಾನವಾಗಿದೆ. ಈ ಮೊದಲು, ಏಪ್ರಿಲ್ 19 ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಅನೇಕ ಹಿಂಸಾಚಾರದ ಘಟನೆಗಳು ವರದಿಯಾದ ನಂತರ ಇನ್ನರ್ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22 ರಂದು ಮರು ಮತದಾನ ನಡೆಸಲಾಯಿತು.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ