LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಮ್ಮು-ಕಾಶ್ಮೀರ ಗಡಿಯಲ್ಲಿ ಇಬ್ಬರು ಉಗ್ರರ ಹತ್ಯೆ

ರಜೌರಿ: ಭಾರತೀಯ ಗಡಿಯೊಳಗೆ ಅಕ್ರಮವಾಗಿ ನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆ ಭಾನುವಾರ ರಾತ್ರಿ ಹೊಡೆದುರುಳಿಸಿದೆ. ಇಲ್ಲಿನ ರಾಜೌರಿ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯಿತು.

ಜಮ್ಮು-ಕಾಶ್ಮೀರ ಪೊಲೀಸ್ ಹಾಗು ಗುಪ್ತಚರ ಇಲಾಖೆ ಉಗ್ರರ ಒಳನುಸುಳುವಿಕೆಯ ಕುರಿತು ಸುಳಿವು ನೀಡಿತ್ತು. ಈ ಮಾಹಿತಿ ಆಧರಿಸಿ ಭಯೋತ್ಪಾದಕರ ಚಲನವಲನ ಪತ್ತೆ ಹಚ್ಚಿದ ಯೋಧರು ಕಾರ್ಯಾಚರಣೆ ಪ್ರಾರಂಭಿಸಿದ್ದರು. ಈ ವೇಳೆ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಸೇನೆ 'ಎಕ್ಸ್​'ನಲ್ಲಿ ಪೋಸ್ಟ್​ ಮಾಡಿದೆ. 'ಉಗ್ರರ ಒಳನುಸುಳುವಿಕೆ ಸಂಬಂಧಿಸಿದಂತೆ ಗುಪ್ತಚರ ಸಂಸ್ಥೆಗಳು ಮತ್ತು ಪೊಲೀಸರ ಮಾಹಿತಿಯ ಆಧಾರದಡಿ ಸೆಪ್ಟೆಂಬರ್ 8 ಮತ್ತು 9ರ ಮಧ್ಯರಾತ್ರಿ ನೌಶೇರಾದ ಲಾಮ್ ಸೆಕ್ಟರ್ ಪ್ರದೇಶದಲ್ಲಿ ಒಳನುಸುಳುವಿಕೆಯ ವಿರುದ್ಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಇಬ್ಬರು ನುಸುಳುಕೋರರನ್ನು ಹತ್ಯೆಗೈಯಲಾಗಿದೆ. ಎರಡು AK-47 ಗನ್, ಒಂದು ಪಿಸ್ತೂಲ್​ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ' ಎಂದು ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್