LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಮಹಾರಾಷ್ಟ್ರದಲ್ಲೂ ನೀಟ್ ಪ್ರಶ್ನೆ ಪತ್ರಿಕೆ ಲೀಕ್​: ಇಬ್ಬರು ಶಿಕ್ಷಕರ ಬಂಧನ

ಲಾತೂರ್​ : ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಮಹಾರಾಷ್ಟ್ರದ ಲಾತೂರ್​ನಲ್ಲೂ ಸದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ನಾಂದೇಡ್‌ನ ಎಟಿಎಸ್‌ ತಂಡವು ಶನಿವಾರ ಬಂಧಿಸಿದೆ.


ಸಂಜಯ್​ ತುಕಾರಾಮ್​ ಜಾಧವ್​ ಮತ್ತು ಜಾಲೀಲ್​ ಉಮಾರ್​ ಖಾನ್​ ಪಠಾಣ್​​ ಅವರನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಶಂಕೆ ಆರೋಪದ ಮೇಲೆ ಬಂಧಿಸಲಾಗಿದ್ದು, ಭಾನುವಾರ ನೋಟಿಸ್​ ನೀಡಿ ಬಿಡುಗಡೆ ಮಾಡಲಾಗಿತು. ಆದರೆ, ಭಾನುವಾರ ಸಂಜೆ ಜಿಲ್ಲಾ ಪರಿಷದ್​ ಶಾಲೆಯ ಶಿಕ್ಷಕರಾಗಿದ್ದ ಸಂಜಯ್​ ತುಕಾರಂ ಜಾಧವ್​ ಮತ್ತು ಜಾಲೀಲ್​ ಉಮಾರ್​ ಖಾನ್​ ಬಂಧಿಸಲಾಗಿದೆ. ಸದ್ಯ ಪ್ರಕರಣದಲ್ಲಿ ನಾಲ್ವರ ಮೇಲೆ ಪ್ರಕರಣ ದಾಖಲಿಸಲಾಗಿದೆ.


ಲಾತೂರ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೆಹಲಿಯ ಈರಣ್ಣ ಮಷ್ಣಜಿ ಕೊಂಗಾಲ್ವಾರ್ ಮತ್ತು ಗಂಗಾಧರ್ (ಪೂರ್ಣ ಹೆಸರು ಮರೆ ಮಾಚಲಾಗಿದೆ) ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​ 3(ವಿ), ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ 4 ಮತ್ತು 10, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420, 120 (ಬಿ) ಮೇಲೆ ಪ್ರಕರಣ ದಾಖಲಿಸಲಾಗಿದೆ.


ಜೊತೆಗೆ​ ಲಾತೂರ್ ಸಿಟಿ ಉಪವಿಭಾಗದ ಪೊಲೀಸ್ ಅಧಿಕಾರಿ ಭಗವತ್ ಫಂಡೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್​ಐಟಿ) ರಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ನಾಂದೇಡ್​ನ ಎಟಿಎಸ್​ ತಂಡವೂ ಶನಿವಾರ ಲಾತೂರ್​ನಲ್ಲಿ ನೀಟ್​ ಪರೀಕ್ಷೆ ಅಕ್ರಮದ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆಸಿತು. ಈ ಇಬ್ಬರು ಶಿಕ್ಷಕರು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಶಂಕಿಸಲಾಗಿದೆ.


ಲಾತೂರ್​ ನಿವಾಸಿಯಾಗಿರುವ ಸಂಜಯ್​ ಜಾಧವ್​​ ಸೋಲಾಪುರದ ಟಕ್ಲಿ ಜಿಲ್ಲಾ ಪರಿಷದ್​​ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿನ ಅಂಬಜೊಗಯ್​ ರಸ್ತೆಯಲ್ಲಿ ವಾಸವಾಗಿರುವ ಉಮರ್​ ಖಾನ್​ ಪಠಾಣ್​​​ ಲಾತೂರ್​ ತಾಲೂಕಿನಲ್ಲಿರುವ ಕಟ್ಪುರ್​​ನ ಜಿಲ್ಲಾ ಪರಿಷದ್​ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇಬ್ಬರೂ ಲಾತೂರ್​ನಲ್ಲಿ ಖಾಸಗಿಯಾಗಿ ಕೋಚಿಂಗ್​ ಕೇಂದ್ರವನ್ನು ನಡೆಸುತ್ತಿದ್ದು, ಶನಿವಾರ ಇಬ್ಬರ ಬಂಧನದ ಬಳಿಕ ನಾಂದೇಡ್​ನ ಎಟಿಎಸ್​ ರಾತ್ರಿ ಪೂರ್ತಿ ತನಿಖೆಯನ್ನು ನಡೆಸಿದರು. ಸದ್ಯ ಶಿವಾಜಿನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಗವತ್​​ ಪಂಡೆ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.


ಈ ಇಡೀ ಪ್ರಕರಣದಿಂದ ಲಾತೂರ್ ಅಕಾಡೆಮಿಗಳ ಹೆಸರಿಗೆ ಧಕ್ಕೆ ಉಂಟಾಗಿದ್ದು, ಭವಿಷ್ಯದಲ್ಲಿ ಇನ್ನು ಕೆಲವರ ಹೆಸರು ಪ್ರಕರಣದಲ್ಲಿ ಸೇರಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್