Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಷ್ಟ್ರದಲ್ಲೂ ನೀಟ್ ಪ್ರಶ್ನೆ ಪತ್ರಿಕೆ ಲೀಕ್​: ಇಬ್ಬರು ಶಿಕ್ಷಕರ ಬಂಧನ

ಲಾತೂರ್​ : ವೈದ್ಯಕೀಯ ಪ್ರವೇಶ ಪರೀಕ್ಷೆ (NEET) ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಮಹಾರಾಷ್ಟ್ರದ ಲಾತೂರ್​ನಲ್ಲೂ ಸದ್ದು ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ನಾಂದೇಡ್‌ನ ಎಟಿಎಸ್‌ ತಂಡವು ಶನಿವಾರ ಬಂಧಿಸಿದೆ.


ಸಂಜಯ್​ ತುಕಾರಾಮ್​ ಜಾಧವ್​ ಮತ್ತು ಜಾಲೀಲ್​ ಉಮಾರ್​ ಖಾನ್​ ಪಠಾಣ್​​ ಅವರನ್ನು ಪ್ರಶ್ನೆ ಪತ್ರಿಕೆ ಸೋರಿಕೆ ಶಂಕೆ ಆರೋಪದ ಮೇಲೆ ಬಂಧಿಸಲಾಗಿದ್ದು, ಭಾನುವಾರ ನೋಟಿಸ್​ ನೀಡಿ ಬಿಡುಗಡೆ ಮಾಡಲಾಗಿತು. ಆದರೆ, ಭಾನುವಾರ ಸಂಜೆ ಜಿಲ್ಲಾ ಪರಿಷದ್​ ಶಾಲೆಯ ಶಿಕ್ಷಕರಾಗಿದ್ದ ಸಂಜಯ್​ ತುಕಾರಂ ಜಾಧವ್​ ಮತ್ತು ಜಾಲೀಲ್​ ಉಮಾರ್​ ಖಾನ್​ ಬಂಧಿಸಲಾಗಿದೆ. ಸದ್ಯ ಪ್ರಕರಣದಲ್ಲಿ ನಾಲ್ವರ ಮೇಲೆ ಪ್ರಕರಣ ದಾಖಲಿಸಲಾಗಿದೆ.


ಲಾತೂರ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೆಹಲಿಯ ಈರಣ್ಣ ಮಷ್ಣಜಿ ಕೊಂಗಾಲ್ವಾರ್ ಮತ್ತು ಗಂಗಾಧರ್ (ಪೂರ್ಣ ಹೆಸರು ಮರೆ ಮಾಚಲಾಗಿದೆ) ಸೇರಿದಂತೆ ನಾಲ್ವರ ವಿರುದ್ಧ ಸೆಕ್ಷನ್​ 3(ವಿ), ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ 4 ಮತ್ತು 10, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 420, 120 (ಬಿ) ಮೇಲೆ ಪ್ರಕರಣ ದಾಖಲಿಸಲಾಗಿದೆ.


ಜೊತೆಗೆ​ ಲಾತೂರ್ ಸಿಟಿ ಉಪವಿಭಾಗದ ಪೊಲೀಸ್ ಅಧಿಕಾರಿ ಭಗವತ್ ಫಂಡೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್​ಐಟಿ) ರಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಸಲಾಗುತ್ತಿದೆ. ನಾಂದೇಡ್​ನ ಎಟಿಎಸ್​ ತಂಡವೂ ಶನಿವಾರ ಲಾತೂರ್​ನಲ್ಲಿ ನೀಟ್​ ಪರೀಕ್ಷೆ ಅಕ್ರಮದ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ದಾಳಿ ನಡೆಸಿತು. ಈ ಇಬ್ಬರು ಶಿಕ್ಷಕರು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂದು ಶಂಕಿಸಲಾಗಿದೆ.


ಲಾತೂರ್​ ನಿವಾಸಿಯಾಗಿರುವ ಸಂಜಯ್​ ಜಾಧವ್​​ ಸೋಲಾಪುರದ ಟಕ್ಲಿ ಜಿಲ್ಲಾ ಪರಿಷದ್​​ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇಲ್ಲಿನ ಅಂಬಜೊಗಯ್​ ರಸ್ತೆಯಲ್ಲಿ ವಾಸವಾಗಿರುವ ಉಮರ್​ ಖಾನ್​ ಪಠಾಣ್​​​ ಲಾತೂರ್​ ತಾಲೂಕಿನಲ್ಲಿರುವ ಕಟ್ಪುರ್​​ನ ಜಿಲ್ಲಾ ಪರಿಷದ್​ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


ಇಬ್ಬರೂ ಲಾತೂರ್​ನಲ್ಲಿ ಖಾಸಗಿಯಾಗಿ ಕೋಚಿಂಗ್​ ಕೇಂದ್ರವನ್ನು ನಡೆಸುತ್ತಿದ್ದು, ಶನಿವಾರ ಇಬ್ಬರ ಬಂಧನದ ಬಳಿಕ ನಾಂದೇಡ್​ನ ಎಟಿಎಸ್​ ರಾತ್ರಿ ಪೂರ್ತಿ ತನಿಖೆಯನ್ನು ನಡೆಸಿದರು. ಸದ್ಯ ಶಿವಾಜಿನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭಗವತ್​​ ಪಂಡೆ ನೇತೃತ್ವದಲ್ಲಿ ತನಿಖೆ ಆರಂಭವಾಗಿದೆ.


ಈ ಇಡೀ ಪ್ರಕರಣದಿಂದ ಲಾತೂರ್ ಅಕಾಡೆಮಿಗಳ ಹೆಸರಿಗೆ ಧಕ್ಕೆ ಉಂಟಾಗಿದ್ದು, ಭವಿಷ್ಯದಲ್ಲಿ ಇನ್ನು ಕೆಲವರ ಹೆಸರು ಪ್ರಕರಣದಲ್ಲಿ ಸೇರಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.


 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ