LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಉಗ್ರರ ಎನ್​ಕೌಂಟರ್

ಶ್ರೀನಗರ,16: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ  ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭಾರತೀಯ ಸೇನೆ ಗುರುವಾರ ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಇಬ್ಬರು ಭಯೋತ್ಪಾದಕರನ್ನು ಎನ್​ಕೌಂಟರ್​​ನಲ್ಲಿ  ಹತ್ಯೆ ಮಾಡಲಾಗಿದೆ. ತಂಗ್‌ಧರ್ ಸೆಕ್ಟರ್‌ನ ಬೇಲಿಯ ಇನ್ನೊಂದು ಬದಿಯಲ್ಲಿ ಶವಗಳು ಬಿದ್ದಿರುವುದು ಕಂಡುಬಂದಿದೆ.

ಬಾರಾಮುಲ್ಲಾ ಲೋಕಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗ ಉತ್ತರ ಕಾಶ್ಮೀರದ ಕುಪ್ವಾರದ ತಂಗ್‌ಧರ್ ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಭದ್ರತಾ ಪಡೆಗಳು ಪ್ರಮುಖ ಭಯೋತ್ಪಾದಕರ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಿವೆ. ಒಳನುಸುಳುವಿಕೆ ಯತ್ನವನ್ನು ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ವಿಫಲಗೊಳಿಸಿತು.

ಮೇ 20ರಂದು ಚುನಾವಣೆ ನಡೆಯಲಿರುವ ಕುಪ್ವಾರದ ಈ ಪ್ರದೇಶವು ಬಾರಾಮುಲ್ಲಾ ಸಂಸದೀಯ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಶ್ರೀನಗರದಲ್ಲಿ ದಾಖಲೆ ಮಟ್ಟದ ಮತದಾನದ ನಂತರ, ಬಾರಾಮುಲ್ಲಾ ಮತ್ತು ಉತ್ತರ ಕಾಶ್ಮೀರದಲ್ಲಿ ಹೆಚ್ಚಿನ ಮತದಾನದ ಪ್ರಮಾಣವು ಕಂಡುಬರಬಹುದು ಎಂದು ನಿರೀಕ್ಷಿಸಲಾಗಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಇನ್ನೊಂದು ಬದಿಯಲ್ಲಿ ಒಳನುಸುಳುತ್ತಿರುವ ಉಗ್ರರ 4 ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹೆಚ್ಚಿನ ಭಯೋತ್ಪಾದಕರ ಪತ್ತೆಗಾಗಿ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಕಳೆದ ತಿಂಗಳು ಇದೇ ರೀತಿಯ ಘಟನೆಯಲ್ಲಿ, ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಎಲ್ಒಸಿ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ಸೇನೆ ವಿಫಲಗೊಳಿಸಿದ ನಂತರ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್