LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹೈಕೋರ್ಟ್ ಏಕಸದಸ್ಯ ಪೀಠದ ಸೇವಾ ಶುಲ್ಕ ಆದೇಶ ಪ್ರಶ್ನಿಸಿ ಉಬರ್ ಮೇಲ್ಮನವಿ

ಬೆಂಗಳೂರು: ಓಲಾ, ಉಬರ್ ಟ್ಯಾಕ್ಸಿ ಸೇವೆಗಳಿಗೆ ಶೇಕಡಾ 5ರಷ್ಟು ಮಾತ್ರ ಸೇವಾ ಶುಲ್ಕವನ್ನು ಸಂಗ್ರಹಿಸುವಂತೆ ಏಕ ಸದಸ್ಯಪೀಠ ನೀಡಿದ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.


ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಉಬರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಜನ್ ಪೂವಯ್ಯ, ''ಆಟೋ ಚಾಲಕ ಮತ್ತು ಅಗ್ರಿಗೇಟರ್ ನಡುವಿನ ಒಪ್ಪಂದವನ್ನು ಸಾರಿಗೆ ಇಲಾಖೆ ನಿಯಂತ್ರಿಸಲು ಅವಕಾಶವಿಲ್ಲ. ಆದರೆ, ಏಕಸದಸ್ಯ ಪೀಠ ಉಬರ್‌ ಅನ್ನು ಅಗ್ರಿಗೇಟರ್ ಎಂದು ಪರಿಗಣಿಸಿದೆ. ಆದರೆ, ಕಂಪನಿ ಎಂಬುದಾಗಿ ತಿಳಿಸಿದೆ. ಇದರಿಂದ ಕಂಪೆನಿ ಯಾವುದೇ ರೀತಿಯ ಸಾರಿಗೆ ಸೇವೆ ನಡೆಸುವುದಕ್ಕೆ ಅವಕಾಶವಿಲ್ಲ. ಆದ್ದರಿಂದ ಮೋಟಾರು ವಾಹನಗಳ ಕಾಯ್ದೆಯಡಿ ನಮ್ಮ ಕಕ್ಷಿದಾರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಿದಂತಾಗಿದೆ. ಆದ್ದರಿಂದ ಏಕಸದಸ್ಯ ಪೀಠ ಆದೇಶವನ್ನು ಮಾರ್ಪಡಿಸಬೇಕು'' ಎಂದು ಕೋರಿದರು.


ಇದಕ್ಕೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ''ಅರ್ಜಿದಾರ ಸಂಸ್ಥೆಗಳು ಅತ್ಯಂತ ಪ್ರಬಲವಾಗಿದ್ದು, ಅವರು ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ದುರುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪವಿದೆ. ಅವರ ನಿಯಮಗಳನ್ನು ಉಲ್ಲಂಘಿಸುತ್ತಿದ್ದಲ್ಲಿ ಸ್ಪರ್ಧಾತ್ಮಕ ಕಾಯಿದೆಯ ಉಲ್ಲಂಘನೆ ಮಾಡುತ್ತಿದ್ದು, ಈ ಕುರಿತು ವಿಚಾರಣೆ ನಡೆಸಲು ಭಾರತೀಯ ಸ್ಪರ್ಧಾ ಆಯೋಗಕ್ಕೆ ಕಳುಹಿಸಬೇಕು'' ಎಂದು ನ್ಯಾಯಪೀಠಕ್ಕೆ ವಿವರಿಸಿದರು.


''ಅಲ್ಲದೆ, ಅಗ್ರಿಗ್ರೇಟರ್‌ಗಳು, ಕಾರುಗಳು, ಆಟೋ ರಿಕ್ಷಾಗಳು, ದ್ವಿಚಕ್ರವಾಹನಗಳಿಗೆ ಪರವಾನಿಗೆ ಪಡೆದುಕೊಳ್ಳಬೇಕು ಎಂಬುದಾಗಿ ಸರ್ಕಾರ ತಿಳಿಸಿದೆ. ಈ ಸಂಬಂಧ ಈವರೆಗೂ ಅಗ್ರಿಗ್ರೇಟರ್‌ಗಳು ಯಾವುದೇ ರೀತಿಯಲ್ಲಿ ನೋಂದಣಿ ಮಾಡುವುದಕ್ಕೆ ಮುಂದಾಗಿಲ್ಲ. ಅವರಿಗೆ ಕಾನೂನಿನ ಭಯವಿಲ್ಲ'' ಎಂದು ತಿಳಿಸಿದರು.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್