LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೇಂದ್ರ ಸಚಿವ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆ; ತನಿಖೆ ಚುರುಕು

ಗಯಾ, ಏಪ್ರಿಲ್ 10: ಕೇಂದ್ರ ಸಚಿವ ಜಿತನ್ ರಾಮ್ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಹತ್ಯೆಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಮೃತಳನ್ನು ಸುಷ್ಮಾದೇವಿ ಎಂದು ಗುರುತಿಸಲಾಗಿದೆ. ಸುಷ್ಮಾ ದೇವಿ ಅವರ ಪತಿ ರಮೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಪ್ರಸ್ತುತ ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿ ಪತಿಗಾಗಿ ದಾಳಿ ನಡೆಸುತ್ತಿದ್ದಾರೆ.









ಅವರಿಬ್ಬರೂ 14 ವರ್ಷಗಳ ಹಿಂದೆ ಅಂತರ್ಜಾತಿ ವಿವಾಹವಾಗಿದ್ದರು, ಮೃತರ ಸಹೋದರಿ ಮತ್ತು ಮಕ್ಕಳು ಮನೆಯಲ್ಲಿ ಇನ್ನೊಂದು ಕೋಣೆಯಲ್ಲಿದ್ದರು. ಗುಂಡಿನ ಶಬ್ದ ಕೇಳಿ ಮೃತನ ಸಹೋದರಿ ಮತ್ತು ಮಕ್ಕಳು ಸ್ಥಳಕ್ಕೆ ಬಂದರು. ಅದೇ ಸಮಯದಲ್ಲಿ, ಗುಂಡೇಟಿನ ಸದ್ದು ಕೇಳಿ ಅಕ್ಕಪಕ್ಕದ ಮನೆಯವರು ಕೂಡ ಓಡಿ ಬಂದಿದ್ದಾರೆ. ರಕ್ತದ ಮಡುವಿನಲ್ಲಿದ್ದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆಂದು ಘೋಷಿಸಿದರು. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಪ್ರಕರಣದ ತನಿಖೆ ಆರಂಭಿಸಿದ್ದಾರೆ.

ಬುಧವಾರ ರಮೇಶ್ ಸಿಂಗ್ ಅವರ ಮನೆಗೆ ಬಂದು ಪತ್ನಿ ಸುಷ್ಮಾ ದೇವಿಯನ್ನು ಬಲವಂತವಾಗಿ ಕೋಣೆಗೆ ಕರೆದೊಯ್ದು ಬಾಗಿಲು ಲಾಕ್ ಮಾಡಿ ಗುಂಡು ಹಾರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಗುಂಡು ಸುಷ್ಮಾ ದೇವಿಯ ಎದೆಗೆ ತಗುಲಿತ್ತು. ಕೊಲೆ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗಾಗಿ ಪೊಲೀಸ್ ತಂಡ ಹುಡುಕಾಟ ನಡೆಸುತ್ತಿದೆ. ಶೀಘ್ರದಲ್ಲೇ ಆರೋಪಿ ಪತಿಯನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್