Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿಗೆ : ಕೇಂದ್ರ ಸಚಿವ ಮೇಘವಾಲ್

ನವದೆಹಲಿ : ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರುಪರಿಶೀಲಿಸುತ್ತಿಲ್ಲ ಎಂದು ಕಾನೂನು ಮತ್ತು ನ್ಯಾಯ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಪುನರುಚ್ಚರಿಸಿದರು.


ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1, 2024 ರಿಂದ ಜಾರಿಗೆ ಬರಲಿವೆ ಎಂದು ಹೇಳಿದರು.


"ಐಪಿಸಿ, ಸಿಆರ್​ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆಯನ್ನು ಅನುಸರಿಸಿದ ನಂತರ ಮತ್ತು ಭಾರತದ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ" ಎಂದು ಮೇಘವಾಲ್ ತಿಳಿಸಿದರು.


"ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ" ಎಂದು ಮೇಘವಾಲ್ ಹೇಳಿದರು.


ಹೊಸ ಕಾನೂನುಗಳ ಬಗ್ಗೆ ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್​​ಮೆಂಟ್ (ಬಿಪಿಆರ್ ಡಿ) ತರಬೇತಿ ನೀಡಲಿದೆ ಎಂದು ಅವರು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ