Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿಗೆ : ಕೇಂದ್ರ ಸಚಿವ ಮೇಘವಾಲ್

ನವದೆಹಲಿ : ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರುಪರಿಶೀಲಿಸುತ್ತಿಲ್ಲ ಎಂದು ಕಾನೂನು ಮತ್ತು ನ್ಯಾಯ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಪುನರುಚ್ಚರಿಸಿದರು.


ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1, 2024 ರಿಂದ ಜಾರಿಗೆ ಬರಲಿವೆ ಎಂದು ಹೇಳಿದರು.


"ಐಪಿಸಿ, ಸಿಆರ್​ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆಯನ್ನು ಅನುಸರಿಸಿದ ನಂತರ ಮತ್ತು ಭಾರತದ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ" ಎಂದು ಮೇಘವಾಲ್ ತಿಳಿಸಿದರು.

Advertisement

"ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ" ಎಂದು ಮೇಘವಾಲ್ ಹೇಳಿದರು.


ಹೊಸ ಕಾನೂನುಗಳ ಬಗ್ಗೆ ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್​​ಮೆಂಟ್ (ಬಿಪಿಆರ್ ಡಿ) ತರಬೇತಿ ನೀಡಲಿದೆ ಎಂದು ಅವರು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*