LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿಗೆ : ಕೇಂದ್ರ ಸಚಿವ ಮೇಘವಾಲ್

ನವದೆಹಲಿ : ಜುಲೈ 1, 2024 ರಿಂದ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರುಪರಿಶೀಲಿಸುತ್ತಿಲ್ಲ ಎಂದು ಕಾನೂನು ಮತ್ತು ನ್ಯಾಯ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ) ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಪುನರುಚ್ಚರಿಸಿದರು.


ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1, 2024 ರಿಂದ ಜಾರಿಗೆ ಬರಲಿವೆ ಎಂದು ಹೇಳಿದರು.


"ಐಪಿಸಿ, ಸಿಆರ್​ಪಿಸಿ ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆಯನ್ನು ಅನುಸರಿಸಿದ ನಂತರ ಮತ್ತು ಭಾರತದ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ" ಎಂದು ಮೇಘವಾಲ್ ತಿಳಿಸಿದರು.


"ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ" ಎಂದು ಮೇಘವಾಲ್ ಹೇಳಿದರು.


ಹೊಸ ಕಾನೂನುಗಳ ಬಗ್ಗೆ ಬ್ಯೂರೋ ಆಫ್ ಪೊಲೀಸ್ ರಿಸರ್ಚ್ ಅಂಡ್ ಡೆವಲಪ್​​ಮೆಂಟ್ (ಬಿಪಿಆರ್ ಡಿ) ತರಬೇತಿ ನೀಡಲಿದೆ ಎಂದು ಅವರು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್