LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಶ್ವವಿದ್ಯಾಲಯಗಳ ಬಂದ್ ನಿರ್ಧಾರ ಸರಿ: ಎಂಎಲ್‌ಸಿ ವಿಶ್ವನಾಥ್

ಮೈಸೂರು: ರಾಜ್ಯದ ಕೆಲವು ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಸರಿಯಿದೆ ಎಂದು ಎಂಎಲ್‌ಸಿ ವಿಶ್ವನಾಥ್ ಅವರು ಮಂಗಳವಾರ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ವಿವಿ ಗಳನ್ನು ಬಂದ್ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿಲುವು ಸರಿಯಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರವಿದ್ದಾಗ ವಿಶ್ವವಿದ್ಯಾಲಯದ ಕುಲಪತಿ ಹುದ್ದೆ ಪಡೆಯಲು 5 ಕೋಟಿ ರೂ. ಕೊಡುತ್ತಿದ್ದರು. ಅದು ಈಗಲೂ ಮುಂದುವರೆದಿದೆ. ಈ ವಿಚಾರ ಎಲ್ಲರಿಗೂ ಗೊತ್ತಿದೆ. ವಿದ್ಯೆಯನ್ನು ಮಾರಾಟಕ್ಕಿಟ್ಟ ಭ್ರಷ್ಟ ವ್ಯವಸ್ಥೆ ಈಗಲೂ ಮುಂದುವರಿದಿದೆ. ವಿದ್ಯಾರ್ಥಿಗಳ ಶುಲ್ಕದಲ್ಲಿ ವಿಶ್ವವಿದ್ಯಾಲಯ ನಡೆಯುವಂತಾಗಿದೆ. ರಾಜ್ಯದಲ್ಲೀಗ ಅಕ್ಷರ, ಆರೋಗ್ಯ ಎರಡಕ್ಕೂ ಬೆಲೆ ಇಲ್ಲದಂತಾಗಿದೆ ಎಂದು ಹೇಳಿದರು.

ಉದಯಗಿರಿ ಕಲ್ಲು ತೂರಾಟ ಪ್ರಕರಣ ಕುರಿತು ಮಾತನಾಡಿ, ಇದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಉತ್ತರಿಸಬೇಕು. ಈ ಸರ್ಕಾರವನ್ನು ರಾಜ್ಯದ ಜನರು ಆಯ್ಕೆ ಮಾಡಿದ್ದಾರೆ. ಎಲ್ಲದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಬೇಕು ಎಂದು ಹರಿಹಾಯ್ದರು.

ರಾಜ್ಯದಲ್ಲಿ ಶಾಂತಿಗೆ ಅವಕಾಶ ಇಲ್ಲದಂತಾಗಿದೆ. ಎಲ್ಲಾ ಕಡೆ, ಪ್ರಕ್ಷುಬ್ಧತೆ, ಗಲಾಟೆ ಗಲಭೆ, ಕೊಲೆ, ಆತ್ಮಹತ್ಯೆಗಳ ನಡೆಯುತ್ತಿವೆ, ಇದಕ್ಕೆಲ್ಲ ಯಾರು ಕಾರಣ? ಜನ ಕಾರಣ ಅಲ್ಲ. ನಾವು ಆಯ್ಕೆ ಮಾಡಿದ ಸರ್ಕಾರ ಕಾರಣ. ಸರ್ಕಾರದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಇದಕ್ಕೆಲ್ಲ ಉತ್ತರ ಕೊಡಬೇಕು ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್