Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾರುಖ್ ಜನಪ್ರಿಯತೆ ಬಗ್ಗೆ ಅಮೆರಿಕ ರಾಯಭಾರಿ ಎರಿಕ್ ಮೆಚ್ಚುಗೆ

ಮುಂಬೈ, ಏಪ್ರಿಲ್.02: ಶಾರುಖ್ ಖಾನ್ ಬಾಲಿವುಡ್‌ನ ಕಿಂಗ್ ಮಾತ್ರವಲ್ಲ, ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಅವರ ಜನಪ್ರಿಯತೆ ಪ್ರಪಂಚದಾದ್ಯಂತ ಇದೆ. ಕಳೆದ ವರ್ಷ ಅವರು ಅಮೆರಿಕ ರಾಯಭಾರಿ ಎರಿಕ್ ಗಾರ್ಸೆಟ್ಟಿ ಮೊದಲ ಬಾರಿಗೆ ಭಾರತಕ್ಕೆ ಬಂದರು. ಈ ವೇಳೆ ಅವರು ಶಾರುಖ್ ಖಾನ್ ಅವರನ್ನು ಭೇಟಿಯಾದರು. ಈಗ ಆ ಭೇಟಿಯ ನೆನಪುಗಳನ್ನು ಮೆಲುಕು ಹಾಕಿರುವ ಅವರು, ಶಾರುಖ್ ಅವರನ್ನು ಭೇಟಿಯಾದ ಬಳಿಕ ಕಚೇರಿಗೆ ಹೋದಾಗ ಅಲ್ಲಿನ ಸಿಬ್ಬಂದಿ ಹೇಗೆ ಪ್ರತಿಕ್ರಿಯಿಸಿದರು ಎಂಬುದನ್ನು ಹೇಳಿದ್ದಾರೆ.

ಎರಿಕ್ ಅವರಿಗೆ ಆರಂಭದಲ್ಲಿ ಶಾರುಖ್ ಖಾನ್ ಮತ್ತು ಅವರ ಜನಪ್ರಿಯತೆ ಬಗ್ಗೆ ಅಷ್ಟು ತಿಳಿದಿರಲಿಲ್ಲ. ಆದರೆ ಅವರು ತಮ್ಮ ಕಚೇರಿಯಲ್ಲಿ ಶಾರುಖ್ ಅವರನ್ನು ಭೇಟಿಯಾದ ಬಗ್ಗೆ ಹೇಳಿದಾಗ ಅಲ್ಲಿನ ಸಿಬ್ಬಂದಿ ಪ್ರತಿಕ್ರಿಯಿಸಿದ್ದನ್ನು ನೋಡಿ ಅವರಿಗೆ ಜನಪ್ರಿಯತೆ ಬಗ್ಗೆ ಒಂದು ಐಡಿಯಾ ಸಿಕ್ಕಿತು. ಅದರ ಬಗ್ಗೆ ಅವರು ಹೇಳಿದ್ದರು.

‘ನಾನು ಭಾರತಕ್ಕೆ ಬಂದಾಗ ಆರಂಭದ ವಾರಗಳಲ್ಲೇ ಶಾರುಖ್ ಖಾನ್ ಅವರನ್ನು ಭೇಟಿಯಾದೆ. ಆ ಸಮಯದಲ್ಲಿ ನಾನು ಅವರೊಂದಿಗೆ ಕ್ರಿಕೆಟ್ ಬಗ್ಗೆ ಮಾತನಾಡಿದೆ. ಶಾರುಖ್ ಖಾನ್ ಐಪಿಎಲ್​ನಲ್ಲಿ ಕೆಕೆಆರ್‌ ತಂಡದ ಮಾಲೀಕರಾಗಿದ್ದಾರೆ. ನಾನು ನನ್ನ ಕಚೇರಿಯನ್ನು ತಲುಪಿದಾಗ ಎಲ್ಲರಿಗೂ ಆಶ್ಚರ್ಯವಾಯಿತು. ನೀವು ಯಾರನ್ನು ಭೇಟಿಯಾಗಿದ್ದೀರಿ ಎಂದು ನಿಮಗೆ ತಿಳಿದಿದೆಯೇ ಎಂದು ಕೇಳಿದರು. ನಾನು ಹೌದು, ಶಾರುಖ್ ಖಾನ್ ಅವರನ್ನು ಭೇಟಿ ಮಾಡಿದೆ ಎಂದು ಹೇಳಿದೆ. ನಾನು ಭೇಟಿಯಾದ ವ್ಯಕ್ತಿಗೆ ಇಷ್ಟು ಜನಪ್ರಿಯತೆ ಇದೆ ಎಂಬುದು ನನಗೆ ಗೊತ್ತಿರಲಿಲ್ಲ ಎಂಬುದನ್ನು ನಾನು ಒಪ್ಪಿಕೊಳ್ಳುತ್ತೇನೆ’ ಎಂದಿದ್ದಾರೆ.

ಎರಿಕ್ 2023ರಲ್ಲಿ ಮೊದಲ ಬಾರಿಗೆ ಭಾರತಕ್ಕೆ ಬಂದಾಗ ಅವರು ಶಾರುಖ್ ಖಾನ್ ಅವರನ್ನು ಮನ್ನತ್‌ನಲ್ಲಿ ಭೇಟಿ ಮಾಡಿದ್ದರು. ಆ ಸಮಯದಲ್ಲಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಶಾರುಖ್ ಅವರೊಂದಿಗಿನ ಫೋಟೋಗಳನ್ನು ಹಂಚಿಕೊಂಡಿದ್ದರು. ಮನ್ನತ್‌ನಲ್ಲಿ ಶಾರುಖ್ ಖಾನ್ ಅವರ ಜೊತೆ ಹಲವು ವಿಚಾರ ಚರ್ಚೆ ಮಾಡಿದ್ದರು. ‘ನಾನು ಹಿಂದಿ ಸಿನಿಮಾ ಬಗ್ಗೆ, ಬಾಲಿವುಡ್ ಮತ್ತು ಹಾಲಿವುಡ್ ಮೇಲೆ ಸಾಂಸ್ಕೃತಿಕ ಪ್ರಭಾವದ ಬಗ್ಗೆಯೂ ಮಾತನಾಡಿದ್ದೇವೆ’ ಎಂದು ಅವರು ಈ ಮೊದಲು ಹೇಳಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ