Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿ.ಪರಮೇಶ್ವರ್ ಸಿಎಂ ಆಗಬೇಕು ಅನ್ನೋದು ನನ್ನ ಆಸೆ : ವಿ.ಸೋಮಣ್ಣ

ತುಮಕೂರು : ರಾಜ್ಯ ಕಾಂಗ್ರೆಸ್ ನಲ್ಲಿ ಸಿ.ಎಂ. ಕುರ್ಚಿಗಾಗಿ ಗುದ್ದಾಟ ನಡೆಯುತ್ತಿರುವಂತೆಯೇ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ, ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ತನ್ನ ಗೆಲುವಿನಲ್ಲಿ ಕಾಂಗ್ರೆಸ ಸಹಕಾರ ಇದೆ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ನಗರದ ಹೊರ ವಲಯದ ಹೆಗ್ಗೆರೆಯಲ್ಲಿ ರೈಲ್ವೆ ಮೇಲು ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ವಿ. ಸೋಮಣ್ಣ, ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿಯಾಗಿದ್ದಾರೆ. ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನೋ ಆಸೆ ಇದೆ ಎಂದರು.

ಪರಮೇಶ್ವರ್ ಅವರ ಸಮ್ಮುಖದಲ್ಲಿಯೇ ಕಾಂಗ್ರೆಸ್ ನಾಯಕರು ಸಹಕಾರ ನೀಡಿದ್ದಾರೆ ಎಂದು ವಿ. ಸೋಮಣ್ಣ ಹೇಳಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ವಿ.ಸೋಮಣ್ಣ ವಿರುದ್ಧ ಸ್ಪರ್ಧಿಸಿದ್ದ ಎಸ್.ಪಿ. ಮುದ್ದ ಹನುಮೇಗೌಡ ಸೋಲಿಗೆ ಕಾಂಗ್ರೆಸ್ ನಾಯಕರೇ ಕಾರಣರಾಗಿದ್ದಾರೆಯೇ? ಎಂಬ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ.

ಒಂದು ಕಡೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅದಕ್ಕೆ ಇಲ್ಲ ಅಂತ ಹೇಳುತ್ತಿದ್ದಾರೆ ಮತ್ತೊಂದು ಕಡೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ಅಥವಾ 9 ರಂದು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಇದೀಗ ಕೇಂದ್ರ ರೈಲ್ವೆ ಸಚಿವ ಈ ಸೋಮಣ್ಣ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನೋದು ನನ್ನ ಆಸೆ ಅಂತ ಹೇಳಿ ಕುರ್ಚಿ ಕದನಕ್ಕೆ ಮತ್ತೊಂದು ಟ್ವಿಸ್ಟ್ ನೀಡಿದ್ದಾರೆ.
ತುಮಕೂರಿನ ಹೆಗ್ಗೆರೆ ಮೇಲ್ ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಈ ಒಂದು ಹೇಳಿಕೆ ನೀಡಿದ್ದು, ಎಲ್ಲೋ ಒಂದು ಕಡೆ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನುವ ಆಸೆ ನನಗೂ ಇದೆ. ಇದೆ ನನ್ನೊಬ್ಬನಿಗೆ ಆಸೆ ಅನ್ನುವುದಕ್ಕಿಂತ ಜಿಲ್ಲೆಯ ಜನರಿಗೆ ಆಸೆ ಇದೆ. ಅಧಿಕಾರ ಮತ್ತೊಂದು ಮಗದೊಂದು ಅದೃಷ್ಟದ ಮೇಲಿದೆ. ಜಿ.ಪರಮೇಶ್ವರ್ ಅವರು ಗೃಹ ಮಂತ್ರಿಗಳಾಗಿ ಆಗುತ್ತಾರೆ ಅನ್ನೋ ಕನಸು ಇರಲಿಲ್ಲ.

ಎಲ್ಲೋ ಒಂದು ಕಡೆ ನನಗೂ ಆಸೆ ಇದೆ ಸುರೇಶಗೌಡ ಹೇಳಿದ್ದು ನೂರಕ್ಕೆ ನೂರು ಸತ್ಯ. ಹಾಗಾಗಿ ನನಗೂ ವೈಯಕ್ತಿಕವಾಗಿ ಆಸೆ ಇದೆ ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿಗಳು ಆಗಲಿ ನನ್ನೊನಿಗೆ ಪರಮೇಶ್ವರ ಮುಖ್ಯಮಂತ್ರಿ ಆಗಲಿ ಅಂತ ಅಲ್ಲ ಇಡೀ ಜಿಲ್ಲೆಯ ಮಹಾಜನತೆಗೆ ಆಸೆ ಇದೆ. ಡಿ ಡಿ ಕೆ ಶಿವಕುಮಾರ್ ಏನಾಗ್ಬೇಕು ಅನ್ನೋದಕ್ಕಿಂತ ಹಣೆಬರಹ ಏನಾಗುತ್ತದೆ ಅನ್ನುವುದು ದೊಡ್ಡದು ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ