Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಲವಾರ... ಹೀಗೊಂದು ಚಂದದ ಮಕ್ಕಳ ಚಿತ್ರ 



         ಚಂದನವನದಲ್ಲಿ ಜನರನ್ನು ಚಿತ್ರಮಂದಿರಕ್ಕೆ ಕರೆತರಲು ಆಕರ್ಷಕ ಟೈಟಲ್‌ಗಳು  ಕಾರಣವಾಗಿರುತ್ತದೆ. ಆ ಸಾಲಿಗೆ ಹೊಸಬರ 'ವಲವಾರ' ಎಂಬ ಮಕ್ಕಳ ಸಿನಿಮಾವೊಂದು ಸಿದ್ದಗೊಂಡಿದೆ.       ಹೊಸ ಅಲೆಯ ಚಿತ್ರಗಳನ್ನು ನಿರ್ಮಿಸುವ ಧ್ಯೇಯದಿಂದ ಮಾರ್ಫ್ ಪ್ರೊಡಕ್ಷನ್ಸ್ ಅಡಿಯಲ್ಲಿ ಗಿರಿಧರ್.ಜೆ ಮತ್ತು ಅನಿರುದ್ ಗೌತಂ ಬಂಡವಾಳ ಹೂಡಿದ್ದಾರೆ. ಮಾಯಾಬಜಾರ್, ಐರಾವತ, ರಾಟೆ, ಜ್ಯೂನಿಯರ್ ಚಿತ್ರಗಳ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಸಕಲೇಶಪುರದ ಪ್ರತಿಭೆ ಸುತನ್ ಗೌಡ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ದಸರಾ ಹಬ್ಬದಂದು ಟ್ರೇಲರ್ ಹಾಗೂ ಒಂದು ಹಾಡನ್ನು ಹೊರಬಿಡಲಾಗಿ, ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆಗೆ ಪಾತ್ರವಾಗಿರುವುದು ತಂಡಕ್ಕೆ ಖುಷಿ ತಂದಿದೆ.

       ಮುಖ್ಯ ಪಾತ್ರದಲ್ಲಿ ಚಿಣ್ಣರುಗಳಾದ ವೇದಿಕ್ ಕೌಶಲ್, ಶಯನ್. ಪೋಷಕ ಪಾತ್ರಧಾರಿಗಳಾಗಿ ಮಾಲತೇಶ್, ಹರ್ಷಿತಾಗೌಡ, ಅಭಯ್ ಮುಂತಾದವರು ಅಭಿನಯಿಸಿದ್ದಾರೆ. ಸಕಲೇಶಪುರದ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಕದ್ರಿ ಮಣಿಕಾಂತ್ ಸಂಗೀತ, ಪ್ರಮೋದ್‌ಮರವಂತೆ ಸಾಹಿತ್ಯ, ಛಾಯಾಗ್ರಹಣ ಬಾಲರಾಜ್‌ಗೌಡ, ಸಂಕಲನ ಶ್ರೀಕಾಂತ್.ಎಸ್.ಹೆಚ್, ಕಾರ್ಯಕಾರಿ ನಿರ್ಮಾಪಕ ಸುಮನ್.ಹೆಚ್.ಎಸ್. ಸಿಂಕ್‌ಸೌಂಡ್ ಆದರ್ಶ್‌ಜೋಸೆಫ್, ಶಬ್ದವಿನ್ಯಾಸ ವಿ.ಜಿ.ರಾಜನ್ ಅವರದ್ದಾಗಿದೆ.

         ಈ ಸಂದರ್ಭದಲ್ಲಿ ಮಾತನಾಡಿರುವ ನಿರ್ದೇಶಕರು "ನನ್ನ ಬಾಲ್ಯದ ದಿನಗಳಲ್ಲಿ ನಡೆದಂತ ಕೆಲ ಘಟನೆಗಳನ್ನು ಚಿತ್ರಕಥೆಗೆ ಬಳಸಿಕೊಂಡಿದ್ದೇನೆ. ಬಡ ರೈತನ ಕುಟುಂಬದಲ್ಲಿ ಒಂದೇ ದಿನದಲ್ಲಿ ನಡೆಯುವ ಕಥೆ ಇದಾಗಿದ್ದು,  ಗೌರ ಎಂಬ ಹಸು ಕೂಡ ಇಲ್ಲಿ ಮುಖ್ಯ ಪಾತ್ರಧಾರಿ. ನೋಡುಗರನ್ನು ಮನರಂಜಿಸುತ್ತಾ ಮುಂದೇನು ಎಂಬ ಕುತೂಹಲ ಹುಟ್ಟಿಸುತ್ತಾ ಸಾಗುವ ಸಿನಿಮಾದಲ್ಲಿ ಬಹುತೇಕ ಹೊಸ ಕಲಾವಿದರನ್ನೇ ಆಯ್ಕೆ ಮಾಡಿಕೊಂಡು  ಅವರನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡಿರುವ ಕುರುಹು ಟ್ರೇಲರ್‌ ನಲ್ಲಿ ಎದ್ದು ಕಾಣುತ್ತದೆ. ಚಿತ್ರಕ್ಕೆ ಸಿಂಕ್ ಸೌಂಡ್ ಬಳಸಿರುವುದು ಮತ್ತೊಂದು ವಿಶೇಷ.

     "ಪವರ್‌ಸ್ಟಾರ್ ಪುನೀತ್‌ರಾಜ್‌ಕುಮಾರ್ ಹಾಗೂ ಅಶ್ವಿನಿ ಪುನೀತ್‌ರಾಜ್‌ಕುಮಾರ್ ಕಥೆ ಕೇಳಿ ಮೆಚ್ಚಿಕೊಂಡು ತಮ್ಮದೆ ಪಿಆರ್‌ಕೆ ಬ್ಯಾನರ್‌ನಲ್ಲಿ ನಿರ್ಮಿಸಲು ಉದ್ದೇಶಿಸಿದ್ದರು. ಆದರೆ ಅಪ್ಪು ಸರ್ ಅವರನ್ನು ಕಳೆದುಕೊಂಡು ಅವರ ಬ್ಯಾನರ್‌ ನಲ್ಲಿ ಸಿನಿಮಾ ಆಗದಿದ್ದಕ್ಕೆ ಬೇಸರವಿದೆ" ಎನ್ನುತ್ತಾರೆ ಸುತನ್‌ಗೌಡ. ಸೆನ್ಸಾರ್ ಮಂಡಳಿಯಿಂದ ’ಯು’ ಪ್ರಮಾಣಪತ್ರ ಪಡೆದಿರುವ 'ವಲವಾರ’ ಚಿತ್ರವು ನವೆಂಬರ್ ತಿಂಗಳಲ್ಲಿ ಚಿತ್ರಮಂದಿರಗಳಿಗೆ ಲಗ್ಗೆ ಹಾಕಲು ಸಜ್ಜಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ