ಮಾಜಿ ಸಚಿವ ಬಿ. ನಾಗೇಂದ್ರ ತಲೆದಂಡ ಬಳಿಕ ರಾಜ್ಯ ಬಿಜೆಪಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಇ. ತುಕಾರಂ ಅವರನ್ನು ಟಾರ್ಗೆಟ್ ಮಾಡಿದೆ. ಮಾಜಿ ಸಚಿವ ಶ್ರೀರಾಮುಲು ಸಂಸದ ತುಕಾರಾಂ ವಿರುದ್ಧ ಕೋರ್ಟ್ನಲ್ಲಿ ದಾವೆ ಹೂಡಲು ಮುಂದಾಗಿದ್ದಾರೆ. ಬಳ್ಳಾರಿ ಸಂಸದ ಸ್ಥಾನವನ್ನು ಅನರ್ಹಗೊಳಿಸುವಂತೆ ದಾವೆ ಹೂಡಲು ಸಿದ್ದರಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.
ಮತ್ತೊಂದು ಕಡೆ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಬಿಜೆಪಿ ನಿಯೋಗಕ್ಕೆ ಬಳ್ಳಾರಿ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿದ್ದ ಅರುಣ್ ಹಿರೇಹಾಳ್ ಸಾಥ್ ನೀಡುವ ಸಾಧ್ಯತೆ ಇದೆ. ವಾಲ್ಮಿಕಿ ನಿಗಮದ ಹಣ ಹಾಗೂ ಪರಿಶಿಷ್ಟ ಕಲ್ಯಾಣ ನಿಧಿ ಚುನಾವಣಾ ಅಕ್ರಮಕ್ಕೆ ಬಳಕೆಯಾಗಿದೆ ಎಂದು ಆರೋಪಿಸಿ ಅರುಣ್ ಹಿರೇಹಾಳ್ ಈ ಹಿಂದೆ ಚುನಾವಣಾ ಆಯೋಗಕ್ಕೆ ತಿಳಿಸಿದ್ದರು.