Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣ: ನಾಗೇಂದ್ರ, ದದ್ದಲ್ ಮನೆಗಳ ಮೇಲೆ ಇಡಿ ದಾಳಿ


ರಾಯಚೂರು/ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳಿಂದ ವಿಚಾರಣೆಗೊಳಗಾಗಿದ್ದ ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸವನಗೌಡ ದದ್ದಲ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಮನೆಗಳ ಮೇಲೆ ಬೆಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಂದು ಏಕಕಾಲದಲ್ಲಿ ದಾಳಿ ನಡೆಸಿದರು.


ರಾಯಚೂರಿನ ಆಶಾಪುರ ರಸ್ತೆಯಲ್ಲಿರುವ ವಾರ್ಡ್ ಸಂಖ್ಯೆ 2, ಆರ್‌ಆರ್ (ರಾಮ್ ರಹೀಮ್) ಕಾಲೊನಿಯಲ್ಲಿರುವ ದದ್ದಲ್​ ಮನೆಯ ಮೇಲೆ ದಾಳಿ ನಡೆಸಿರುವ ಮೂವರು ಅಧಿಕಾರಿಗಳ ತಂಡ, ಬೆಳಗ್ಗೆ 7 ಗಂಟೆಯಿಂದ ಮನೆಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದೆ.


ಇಬ್ಬರು ವಶಕ್ಕೆ: ಬಳ್ಳಾರಿಯಲ್ಲಿ ಬಿ.ನಾಗೇಂದ್ರ ಅವರ ಇಬ್ಬರು ಆಪ್ತ ಸಹಾಯಕರಾಗಿದ್ದ ವಿಜಯಕುಮಾರ್ ಮತ್ತು ಚೇತನ್ ಎಂಬವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮುಂಜಾನೆ, ಸಿಆರ್​ಪಿಎಫ್ ಭದ್ರತೆಯೊಂದಿಗೆ ಮೂರು ತಂಡಗಳಾಗಿ ಬಳ್ಳಾರಿಗೆ ಆಗಮಿಸಿದ ಇಡಿ ಅಧಿಕಾರಿಗಳು ನೆಹರು ಕಾಲೊನಿಯಲ್ಲಿರುವ ನಾಗೇಂದ್ರ ಮನೆ ಮೇಲೆ ದಾಳಿ ಮಾಡಿದರು.




ನಾಗೇಂದ್ರ ಆಪ್ತರ ಮಾಹಿತಿ ಸಂಗ್ರಹಿಸುತ್ತಿರುವ ಇಡಿ‌ ಅಧಿಕಾರಿಗಳು, ನಾಗೇಂದ್ರರ ಮನೆಯಲ್ಲಿರುವ ದಾಖಲೆಗಳನ್ನೂ ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಪೊಲೀಸರ ನೆರವು ಪಡೆಯದ ಇಡಿ, ಸಿಆರ್​ಪಿಎಫ್‌ ಯೋಧರ ಸಹಕಾರದಿಂದ ದಾಳಿ ನಡೆಸಿದೆ. ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.


ಬೆಂಗಳೂರಿನ ಮನೆಯಲ್ಲೂ ಶೋಧ: ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ರಾಮ್ಕಿ ಉತ್ಸವ್​ ಅಪಾರ್ಟ್ಮೆಂಟ್​ನಲ್ಲಿರುವ ನಾಗೇಂದ್ರ ಅವರ ಮನೆ ಮೇಲೂ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿ ಬಸವನಗೌಡ ದದ್ದಲ್ ನಿವಾಸವಲ್ಲದೆ, ಬೆಂಗಳೂರು ನಗರದ ಯಲಹಂಕ, ಕೋರಮಂಗಲ ಸೇರಿದಂತೆ ಏಕಕಾಲದಲ್ಲಿ 18 ಕಡೆಗಳಲ್ಲಿ ದಾಳಿ ಮಾಡಿ ಮಹತ್ವದ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ