LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ : ನಕಲಿ ಖಾತೆ ಸೃಷ್ಟಿಸಿ ವಹಿವಾಟು



ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮದಲ್ಲಿ ಯಾವುದೋ ಕಂಪನಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಕೋಟಿ ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿರುವುದು ಎಸ್ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ. ವಂಚಕರ ತಂತ್ರದಿಂದ ಅಸಲಿ ಕಂಪನಿಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.


ವಿವಿಧ ಕಂಪನಿಗಳ ಮಾಲೀಕರ ಗಮನಕ್ಕೆ ಬಾರದಂತೆ ಅವುಗಳ ದಾಖಲೆಗಳನ್ನು ಬಳಸಿರುವ ವಂಚಕರು, ಆ ದಾಖಲೆಗಳನ್ನು ಬಳಸಿಕೊಂಡು ನಕಲಿ ಖಾತೆ ತೆರೆದು ಕೋಟ್ಯಂತರ ರೂ. ವಹಿವಾಟು ನಡೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ, ಹಣ ವರ್ಗಾವಣೆಯಾದ ಖಾತೆಯ ಕಂಪನಿಗಳ ಮಾಲೀಕರನ್ನು ಪತ್ತೆ ಹಚ್ಚಿ ವಿಚಾರಣೆ ಕೈಗೊಂಡಾಗ ಈ ವಿಷಯ ಬಹಿರಂಗವಾಗಿದೆ.







ಅನೇಕ ಮಾಲೀಕರಿಗೆ ತಮ್ಮ ಕಂಪನಿಗಳ ಹೆಸರಿನಲ್ಲಿ ಬೇರೆ ನಕಲಿ ಖಾತೆಗಳನ್ನು ಸೃಷ್ಟಿಸಿರುವುದೇ ಗೊತ್ತಿಲ್ಲ. ಅದರಲ್ಲಿಯೂ ಆ ಖಾತೆಗಳಲ್ಲಿ ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿರುವುದು ಗಮನಕ್ಕೇ ಬಂದಿಲ್ಲ ಎಂಬುದು ತಿಳಿದು ಬಂದಿದೆ. ಒಂದೊಂದು ನಕಲಿ ಖಾತೆಯಲ್ಲಿ 5 ಕೋಟಿಯಂತೆ 20 ಕೋಟಿಗೂ ಅಧಿಕ ಹಣದ ವಹಿವಾಟು ನಡೆದಿದ್ದು, ಬಳಿಕ ಅವುಗಳಿಂದ ಹಣ ವಿತ್ ಡ್ರಾ ಮಾಡಿಕೊಳ್ಳಲಾಗಿದೆ.‌


ಸದ್ಯ ಎಸ್ಐಟಿ ನೀಡಿದ್ದ ನೋಟಿಸ್ ಬಳಿಕ ಅಸಲಿ ವಿಷಯ ತಿಳಿದ ಕಂಪನಿಗಳ ಮಾಲೀಕರು ನೀಡಿರುವ ದೂರಿನನ್ವಯ ನಾಲ್ಕು ಎಫ್ಐಆರ್ ದಾಖಲಾಗಿವೆ. ಕಂಪನಿಗಳ ಮಾಲೀಕರಾದ ವಿಜಯ್ ಕೃಷ್ಣ ಹಾಗೂ ನವೀನ್ ಎಂಬುವವರು ನೀಡಿರುವ ದೂರಿನನ್ವಯ ಕೆಪಿ ಅಗ್ರಹಾರ ಠಾಣೆಯಲ್ಲಿ ರಾಘವೆಂದ್ರ, ರೇಖಾ ಎಂಬುವವರು ನೀಡಿರುವ ದೂರಿನನ್ವಯ ವಿಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿವೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್