Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ : ನಕಲಿ ಖಾತೆ ಸೃಷ್ಟಿಸಿ ವಹಿವಾಟು



ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮದಲ್ಲಿ ಯಾವುದೋ ಕಂಪನಿಗಳ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಕೋಟಿ ಕೋಟಿ ರೂಪಾಯಿ ಹಣ ವರ್ಗಾವಣೆ ಮಾಡಿರುವುದು ಎಸ್ಐಟಿ ತನಿಖೆಯಲ್ಲಿ ಬಹಿರಂಗವಾಗಿದೆ. ವಂಚಕರ ತಂತ್ರದಿಂದ ಅಸಲಿ ಕಂಪನಿಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ನಾಲ್ಕು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.


ವಿವಿಧ ಕಂಪನಿಗಳ ಮಾಲೀಕರ ಗಮನಕ್ಕೆ ಬಾರದಂತೆ ಅವುಗಳ ದಾಖಲೆಗಳನ್ನು ಬಳಸಿರುವ ವಂಚಕರು, ಆ ದಾಖಲೆಗಳನ್ನು ಬಳಸಿಕೊಂಡು ನಕಲಿ ಖಾತೆ ತೆರೆದು ಕೋಟ್ಯಂತರ ರೂ. ವಹಿವಾಟು ನಡೆಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ, ಹಣ ವರ್ಗಾವಣೆಯಾದ ಖಾತೆಯ ಕಂಪನಿಗಳ ಮಾಲೀಕರನ್ನು ಪತ್ತೆ ಹಚ್ಚಿ ವಿಚಾರಣೆ ಕೈಗೊಂಡಾಗ ಈ ವಿಷಯ ಬಹಿರಂಗವಾಗಿದೆ.







ಅನೇಕ ಮಾಲೀಕರಿಗೆ ತಮ್ಮ ಕಂಪನಿಗಳ ಹೆಸರಿನಲ್ಲಿ ಬೇರೆ ನಕಲಿ ಖಾತೆಗಳನ್ನು ಸೃಷ್ಟಿಸಿರುವುದೇ ಗೊತ್ತಿಲ್ಲ. ಅದರಲ್ಲಿಯೂ ಆ ಖಾತೆಗಳಲ್ಲಿ ಕೋಟ್ಯಂತರ ರೂಪಾಯಿ ಹಣದ ವಹಿವಾಟು ನಡೆದಿರುವುದು ಗಮನಕ್ಕೇ ಬಂದಿಲ್ಲ ಎಂಬುದು ತಿಳಿದು ಬಂದಿದೆ. ಒಂದೊಂದು ನಕಲಿ ಖಾತೆಯಲ್ಲಿ 5 ಕೋಟಿಯಂತೆ 20 ಕೋಟಿಗೂ ಅಧಿಕ ಹಣದ ವಹಿವಾಟು ನಡೆದಿದ್ದು, ಬಳಿಕ ಅವುಗಳಿಂದ ಹಣ ವಿತ್ ಡ್ರಾ ಮಾಡಿಕೊಳ್ಳಲಾಗಿದೆ.‌

Advertisement

ಸದ್ಯ ಎಸ್ಐಟಿ ನೀಡಿದ್ದ ನೋಟಿಸ್ ಬಳಿಕ ಅಸಲಿ ವಿಷಯ ತಿಳಿದ ಕಂಪನಿಗಳ ಮಾಲೀಕರು ನೀಡಿರುವ ದೂರಿನನ್ವಯ ನಾಲ್ಕು ಎಫ್ಐಆರ್ ದಾಖಲಾಗಿವೆ. ಕಂಪನಿಗಳ ಮಾಲೀಕರಾದ ವಿಜಯ್ ಕೃಷ್ಣ ಹಾಗೂ ನವೀನ್ ಎಂಬುವವರು ನೀಡಿರುವ ದೂರಿನನ್ವಯ ಕೆಪಿ ಅಗ್ರಹಾರ ಠಾಣೆಯಲ್ಲಿ ರಾಘವೆಂದ್ರ, ರೇಖಾ ಎಂಬುವವರು ನೀಡಿರುವ ದೂರಿನನ್ವಯ ವಿಜಯನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿವೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*