Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ!



ಬೆಂಗಳೂರು: ವಿಧಾನ ಮಂಡಲ ಮಳೆಗಾಲದ ಅಧಿವೇಶನ  ಇಂದು ಇನ್ನಷ್ಟು ರಂಗೇರಲಿದೆ. ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದ ಕುರಿತು ನಿನ್ನೆ ವಿಧಾನಸಭೆ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ವಿಪಕ್ಷ ನಾಯಕ ಆರ್. ಆಶೋಕ್ ಅವರು ಈ ಚರ್ಚೆಯನ್ನು ಮುನ್ನಡೆಸಿದ್ದರು. ಇಂದು ಅದು ಮುಂದುವರಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇದಕ್ಕೆ ಉತ್ತರ ನೀಡಲಿದ್ದಾರೆ.


ನಿನ್ನೆ ಮಾತನಾಡಿದ ಆರ್.‌ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.


ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು. ʼನಿಮ್ಮ ವಾದವನ್ನ ಸಮಾಧಾನವಾಗಿ ಕೇಳ್ತೀನಿ. ನಾನು ಉತ್ತರ ಕೊಡುವಾಗಲೂ ಅಷ್ಟೇ ಸಮಾಧಾನದಿಂದ ಕೇಳಬೇಕುʼ ಎಂದಿದ್ದರು.



ʼ187 ಕೋಟಿ ಅಲ್ಲ ಅದು ಬರೀ 87 ಕೋಟಿ ಮಾತ್ರ ವರ್ಗಾವಣೆ ಆಗಿರುವುದು. ಹಣ ಎಲ್ಲಿಯವರೆಗೂ ಸರ್ಕಾರದ ಸುಪರ್ದಿಯಲ್ಲಿರುತ್ತೆ, ಬಳಿಕ ಆ ಹಣ ಯಾರಿಗೆ ಹೋಗುತ್ತೆ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡ್ತೀನಿ. ಇದರಲ್ಲಿ ಯಾರ ಪಾತ್ರ ಎಷ್ಟಿದೆ. ಈ ಹಿಂದೆ ಹೇಗೆ ವ್ಯವಹಾರ ನಡೆದಿದೆ ಅದೆಲ್ಲವನ್ನ ಸಂಪೂರ್ಣವಾಗಿ ಕೊಡ್ತೀನಿʼ ಎಂದು ಹೇಳಿದ್ದರು. ಎಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪ್ರಕರಣಗಳನ್ನೂ ಸಿಎಂ ಪ್ರಸ್ತಾವಿಸುವುದು ಖಚಿತವಾಗಿದೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*