LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಔಪಚಾರಿಕ ಶಿಕ್ಷಣದಲ್ಲಿ ಮೌಲ್ಯಯುತ ಶಿಕ್ಷಣ ಅನಿವಾರ್ಯ: ಡಾ. ಸಾಹೇಬ್ಆಲಿ ಹೆಚ್ ನಿರಗುಡಿ


ಬಳ್ಳಾರಿ (ಚೇಳ್ಳಗುರ್ಕಿ) : (ಡಿ.11)  ಶ್ರೀಕ್ಷೇತ್ರ ಎರ್ರಿತಾತನವರ ಸನ್ನಿಧಿಯಲ್ಲಿ ವೀರಶೈವ ವಿದ್ಯಾವರ್ಧಕ ಸಂಘದ ಕೊಟ್ಟೂರುಸ್ವಾಮಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ನಡೆದ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿದ ಡಾ.ಸಾಹೇಬ್ಆಲಿ ಹೆಚ್. ನಿರಗುಡಿ ಯವರು  ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳನ್ನು ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಯನ್ನಾಗಿಸಿ, ಗೌರವಯುತ ಸ್ಥಾನದಲ್ಲಿ ಕೂರಿಸಬೇಕೆನ್ನುವುದು ಪ್ರತಿಯೊಬ್ಬ ತಂದೆ-ತಾಯಿಯರ ಕನಸಾಗಿರುತ್ತದೆ. ಹಾಗಾಗಿ ಶಿಕ್ಷಣವು ಮಕ್ಕಳಲ್ಲಿ ದೇಶಭಕ್ತಿ, ಶಿಸ್ತು, ಸಂಯಮ, ಸಂಸ್ಕಾರವನ್ನು ಸೃಷ್ಟಿಸುವುದರಿಂದ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಯೊಬ್ಬ ಮಕ್ಕಳಿಗೆ ಮೌಲ್ಯ ಶಿಕ್ಷಣದ ಅವಶ್ಯಕತೆ ಇದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಸಾಹಿತಿಗಳಾದ ಶ್ರೀ ಕೆ.ಬಿ. ಸಿದ್ದಲಿಂಗಪ್ಪರವರು ಪುರ ಮತ್ತು ಪೌರದ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಸದಾಶಿವನಗೌಡ, ಸಿಂದಗಿ ಗವಿಸಿದ್ದಪ್ಪ ಉಪಸ್ಥಿತರಿದ್ದರು. ಶಿಬಿರದ ನಿರ್ದೇಶಕರಾದ ಡಾ.ಸತೀಶ್ ಎ ಹಿರೇಮಠ್ ರವರು ಸ್ವಾಗತ ಮತ್ತು ಪ್ರಾಸ್ತಾವಿಕ ನುಡಿಗಳನ್ನು ಆಡಿದರು. ಶಿಬಿರದ ಸಂಯೋಜಕರಾದ ಡಾ. ವಿಕ್ರಂ ಪಿ ಹಿರೇಮಠ್ ರವರು ಶಿಬಿರಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿಗಳು ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್