Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಬ್ರಾಹ್ಮಣ ವೈದಿಕ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ವಸಂತ ಸಂಸ್ಕೃತ ಶಿಬಿರ

ಬಳ್ಳಾರಿ, ಮೇ 06.: ವಿಶ್ವ ಬ್ರಾಹ್ಮಣ ವೈದಿಕ ಪ್ರತಿಷ್ಠಾನ ಟ್ರಸ್ಟ್ (ರಿ) ಬಳ್ಳಾರಿ ವತಿಯಿಂದ ಸಂಸ್ಕೃತ ಭಾರತಿ ಕರ್ನಾಟಕ ಉತ್ತರಂ ಹಾಗೂ ಶ್ರೀ ವಾಚಸ್ಪತಿ ಸಂಸ್ಕೃತ ಗುರುಕುಲದ ಸಹಯೋಗದಲ್ಲಿ ಏಪ್ರಿಲ್ 21ರಿಂದ ಮೇ 1ರವರೆಗೆ ಆಯೋಜಿಸಲಾದ  ವಸಂತ ಸಂಸ್ಕೃತ ಶಿಬಿರ 2026 ಯಶಸ್ವಿಯಾಗಿ ನಡೆಯಿತು.
ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಮತ್ತು ಭಾರತೀಯ ಪರಂಪರೆ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಈ ಶಿಬಿರದಲ್ಲಿ ಪ್ರತಿದಿನವೂ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಿಬಿರವನ್ನು ಶಂಕರಾಚಾರ್ಯ ಜಯಂತಿಯ ಅಂಗವಾಗಿ ಆನೆಗೂಂದಿ ಮಹಾಸಂಸ್ಥಾನ ಮಠದ ಶ್ರೀ ಕಾಳಹಸ್ತೇಂದ್ರ ಸ್ವಾಮಿಗಳ ಸಾನ್ನಿಧ್ಯದಲ್ಲಿ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಕೃತ ಭಾರತಿ ಕಾರ್ಯಕರ್ತರು ಹಾಗೂ ರುದ್ರಗುರುಕುಲದ ಗುರುಗಳಾದ ಮಹಾಂತೇಶ ಶಾಸ್ತ್ರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಸದಸ್ಯರು ಸಹ ಉಪಸ್ಥಿತರಿದ್ದರು.
ಶಿಬಿರದಲ್ಲಿ ಶಿಕ್ಷಕ ಹಾಗೂ ಸಂಗೀತಗಾರರಾದ ವಸುದ ಅವರು ಮಕ್ಕಳಿಗೆ ಸ್ತೋತ್ರ ಮತ್ತು ಭಜನೆಗಳನ್ನು ಕಲಿಸಿದರು. ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷರಾದ ರವೀಂದ್ರ ಆಚಾರ್ಯ ಅವರು ಯೋಗಾಸನ ತರಬೇತಿ ನೀಡಿದರು. ಬಳ್ಳಾರಿಯ ಇಸ್ಕಾನ್ ದೇವಸ್ಥಾನದ ಸಂಕೀರ್ತನಕಾರರು ಮಕ್ಕಳಿಗೆ ಸಂಕೀರ್ತನೆ ಮಾಡಿಸಿದರು.
ಚಿತ್ರಕಲೆ ಕ್ಷೇತ್ರದಲ್ಲಿ ಖ್ಯಾತಿ ಪಡೆದ ಮಲ್ಲಿಕಾರ್ಜುನ ಅಪಗುಂಡಿ ಅವರು ಮಕ್ಕಳಿಗೆ ಚಿತ್ರಕಲಾ ತರಬೇತಿ ನೀಡಿದರೆ, ರಾಷ್ಟ್ರೋತ್ಥಾನ ಸಂಘದ ಕಾರ್ಯಕರ್ತರಾದ ಪ್ರಸನ್ನ ಅವರು ವಿವಿಧ ಕ್ರೀಡೆಗಳನ್ನು ನಡೆಸಿಕೊಟ್ಟರು. ದ್ವಾದಶ ಜ್ಯೋತಿರ್ಲಿಂಗಗಳ ಕುರಿತು ಮಕ್ಕಳಿಂದ ಪೌರಾಣಿಕ ವಿವರಣೆಗಳನ್ನು ನೀಡಲಾಯಿತು.
ಸಂಸ್ಕೃತ ಉಪನ್ಯಾಸಕರಾದ ಪಾಂಡುರಂಗ ಆಚಾರ್ಯ ಅವರು ಸಂಸ್ಕಾರಪರ ಉಪನ್ಯಾಸ ನೀಡಿದರು. ಪೋಷಕರ ಮಹತ್ವ ತಿಳಿಸಲು ಮಾತೃ ವಂದನೆ ಕಾರ್ಯಕ್ರಮವನ್ನು ಆಯೋಜಿಸಿ, ಮಕ್ಕಳು ತಂದೆ-ತಾಯಿಯ ಪಾದ ಪೂಜೆ ನೆರವೇರಿಸಿದರು.
ಇದಲ್ಲದೆ, ಸಂಸ್ಕೃತ ನೃತ್ಯ, ನಾಟಕ ತರಬೇತಿಯನ್ನು ಶ್ರೀ ವಿಶ್ವರೂಪ ಆಚಾರ್ಯ ಅವರು ನೀಡಿದರು.
ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಳ್ಳಾರಿಯ ಶಂಕರಮಠದ ಧರ್ಮಾಧಿಕಾರಿಗಳಾದ ಬಿ.ಕೆ.ಬಿ.ಎನ್. ಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷರಾದ ರವೀಂದ್ರ ಆಚಾರ್ಯ ವಹಿಸಿದ್ದರು.
ಕಾರ್ಯಕ್ರಮಕ್ಕೆ ಸಂಸ್ಕೃತ ಉಪನ್ಯಾಸಕರಾದ ವೆಂಕಟೇಶ್ ಯಾದವ್ ಸ್ವಾಗತ ಕೋರಿದರು. ಶಿಕ್ಷಕರಾದ ವಸುದ ಅವರು ಕಾರ್ಯಕ್ರಮ ನಿರೂಪಣೆ ಮತ್ತು ಸಹಕಾರ ನೀಡಿದರು.
ಸಮಾರೋಪದಲ್ಲಿ ಮಕ್ಕಳಿಂದ ಸಂಸ್ಕೃತ ನೃತ್ಯ, ಭರತನಾಟ್ಯ, ಸ್ತೋತ್ರ ಪಠಣ, ಆದಿ ಶಂಕರಾಚಾರ್ಯ ನಾಟಕ ಹಾಗೂ ವಿಧಿ ವಿಲಾಸಿತಂ ಸಂಸ್ಕೃತ ನಾಟಕ ಪ್ರದರ್ಶನಗೊಂಡು ಮೆಚ್ಚುಗೆ ಗಳಿಸಿತು.
ಈ ಶಿಬಿರಕ್ಕೆ ಸ್ಥಳವಕಾಶ ವ್ಯವಸ್ಥೆ ಮತ್ತು ಸಂಪೂರ್ಣ ಸಹಕಾರವನ್ನು ವಿಶ್ವ ಬ್ರಾಹ್ಮಣ ವೈದಿಕ ಪ್ರತಿಷ್ಠಾನ ಟ್ರಸ್ಟ್ (ರಿ) ಹಾಗೂ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿ ಒದಗಿಸಿತು.
ಶಿಬಿರದ ಸಂಚಾಲಕರಾಗಿ ಸಂಸ್ಕೃತ ಶಿಕ್ಷಕರೂ ಸಾಹಿತಿಗಳೂ ಆದ ಶ್ರೀ ವಿಶ್ವರೂಪ ಆಚಾರ್ಯ ಕಾರ್ಯನಿರ್ವಹಿಸಿದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಯಾಣಿಕರ ಬಹುದಿನಗಳ ಬೇಡಿಕೆ ಈಡೇರಿಕೆ – ಅಥಣಿ-ಪುಣೆ ಹಾಗೂ ಅಥಣಿ-ಕೊಲ್ಲಾಪುರ ಬಸ್ ಸೇವೆಗೆ ಶಾಸಕ ಲಕ್ಷ್ಮಣ ಸವದಿ ಚಾಲನೆಪ್ರಥಮ ವರ್ಷದ ಪಿಯುಸಿಕಾಲೇಜಿಗೆ ಪ್ರವೇಶ ಪ್ರಾರಂಭವಾಗಿರುವುದು ಸಂತಸ ತಂದಿದೆ : ಪಾಸೋಡಿಬಳ್ಳಾರಿ: ರಾಷ್ಟಿçÃಯ ಹೆದ್ದಾರಿ 150-ಎ ರಸ್ತೆಯ ಸೇತುವೆ ಮರು ನಿರ್ಮಾಣ; 60 ದಿನಗಳ ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆಮೋಳೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ; ಕಾಂಗ್ರೆಸ್ ಮುಖಂಡರಿAದ ಶಾಸಕ ರಾಜು ಕಾಗೆಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ..!! ರನ್ನ ಬೆಳಗಲಿ ಪಟ್ಟಣದ ಪಿಕೆಪಿಎಸ್ ಅಧ್ಯಕ್ಷರಾಗಿ ನಿಂಗಪ್ಪ ಆರೇನಾಡ, ಉಪಾಧ್ಯಕ್ಷರಾಗಿ ಯಮನಪ್ಪ ಚಂದಪ್ಪನವರ ಆಯ್ಕೆ ಕಳಪೆ ಬಿತ್ತನೆ ಬೀಜ ಮಾರಾಟಕ್ಕೆ ಬ್ರೇಕ್ ಹಾಕಿ, ಅಗತ್ಯ ಪ್ರಮಾಣದ ಯೂರಿಯಾ ಒದಗಿಸಿ: ರೈತ ಸಂಘದಿಂದ ತಹಶೀಲ್ದಾರ್, ಕೃಷಿ ಅಧಿಕಾರಿಗೆ ಮನವಿ.ಕುಂಟೋಜಿ ಗ್ರಾಮದಲ್ಲಿ ನೀರಿನ ಬರೆ; ಗ್ರಾಪಂ ಮುಂದೆ ಅರೆಬೆತ್ತಲೆ ಪ್ರತಿಭಟನೆ!ಕ್ರಮ ಮರಳು ಅಡ್ಡೆಗಳ ಮೇಲೆ ಮತ್ತೆ ಲೋಕಾಯುಕ್ತರ ದಾಳಿ - ಅವಳಿ ತಾಲೂಕಿನ ೮ ಕಡೆಗಳಲ್ಲಿ ೮ ತಂಡಗಳಿಂದ ದಾಳಿ : ಧಂದೆಗೆ ಬಯಸುತ್ತಿದ್ದ ಟಿಪ್ಪರ್, ಹಿಟಾಚಿ ವಶ ಸಂತ್ರಸ್ತರ ಧರಣಿ ೨೦ನೆಯ ದಿನಕ್ಕೆಸಂಸ್ಕಾರಯುತ ವಿಚಾರಗಳನ್ನು ಅಳವಡಿಸಿಕೊಂಡಾಗ ಬದುಕು ಸುಂದರ : ಅಭಿನವ ಯಚ್ಚರ ಸ್ವಾಮೀಜಿ