Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ದೂರಿಯಾಗಿ ವೀರಭದ್ರೇಶ್ವರ ಜಾತ್ರೆ: ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ಅನ್ನದಾನೇಶ್ವರರಿಗೆ ವೀರಭದ್ರೇಶ್ವರ ಕುಲಪುತ್ರ ಪ್ರಶಸ್ತಿ ಪ್ರದಾನ

ಯರಗಟ್ಟಿ: ಪಟ್ಟಣದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಶುಕ್ರವಾರ ಅದ್ದೂರಿಯಾಗಿ ಜರುಗಿತು.

ಜಾತ್ರೆ ನಿಮಿತ್ತ ಬೆಳಗ್ಗೆ ರುದ್ರಾಭೀ?ಕ, ಮಹಾಪೂಜೆ ಹಾಗೂ ಭಕ್ತರ ಹರಕೆ ತೀರಿಸುವ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಹತ್ತು ಗಂಟೆಗೆ ವೀರಭದ್ರೇಶ್ವರ ಮೂರ್ತಿಯ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿತು. ಕರಡಿ ಮಜಲು, ಭಜನಾ ಮೇಳ, ಡೊಳ್ಳು ಮೇಳ, ಕುಂಭ ಹೊತ್ತ ನೂರಾರು ಮುತ್ತೈದೆಯರು ಪಾಲ್ಗೊಂಡಿದ್ದರು. ಪುರವಂತರ ಕುಣಿತ ಬೀದಿಯುದ್ದಕ್ಕೂ ಪಲ್ಲಕ್ಕಿ ಉತ್ಸವವು ಜನರ ಗಮನ ಸೆಳೆಯಿತು.

ನಂತರ ನಡೆದ ಅಗ್ನಿ ಪ್ರವೇಶ ಕಾರ್ಯಕ್ರಮಕ್ಕೆ ತೋರಣಗಟ್ಟಿ ಪುರವಂತರಾದ ಪರಪ್ಪ ಶಿಂಗಾರಗೊಪ್ಪ ಹಾಗೂ ತಂಡದವರು ಪಾಲ್ಗೊಂಡಿದ್ದರು. ಅಗ್ನಿ ಪ್ರವೇಶದಲ್ಲಿ ಹಲವು ಭಕ್ತರು ಕೆಂಡ ಹಾಯ್ದು ತಮ್ಮ ಹರಕೆ ತೀರಿಸಿದರು.

ನಂತರ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಪೂಜ್ಯರನ್ನು ಸಕಲ ವಾದ್ಯಗೋಷ್ಠಿ ಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ನಂತರ ಜಾತ್ರಾ ಮಹೋತ್ಸವ ಕಮೀಟಿ ವತಿಯಿಂದ ಬಂಡಿಗಣಿ ಮಠದ ಪೂಜ್ಯ ದಾಸೋಹ ಚಕ್ರವರ್ತಿ ಅನ್ನದಾನೇಶ್ವರಿಗೆ ವೀರಭದ್ರೇಶ್ವರ ಕುಲಪುತ್ರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ವೇಳೆ ಈರಪ್ಪ ಹಾದಿಮನಿ ಹಾದಿಮನಿ, ಕುಮಾರ ಹಿರೇಮಠ, ಈರಣ್ಣಾ ಮಠಪತಿ, ದುಂಡಯ್ಯ ಹಿರೇಮಠ, ಶಿವಲಿಂಗಪ್ಪ ವಾಲಿ, ಬಾಬು ಪಟ್ಟೇದ, ಶಿವಾನಂದ ಕರ್ಜಗಿಮಠ, ಸದಾನಂದ ಹಣಬರ, ಬಸವರಾಜ ವಾಲಿ, ಶಿವಾನಂದ ಬಳಿಗಾರ, ಶಂಕರ ಇಟ್ನಾಳ, ರಫೀಕ ಬಾಂಬೆ, ಮೋಹನ ಹಾದಿಮನಿ, ಗೌಡಪ್ಪ ಸವದತ್ತಿ, ಪ್ರವೀಣ ಬೆಣ್ಣಿ, ಸಂತೋ? ವಾಲಿ, ಸೇರಿದಂತೆ ತೋರಣಗಟ್ಟಿ, ಮುಗಳಿಹಾಳ, ಹಳ್ಳೂರ ಪುರವಂತರು ಸೇರಿದಂತೆ ಅನೇಕರು ಇದ್ದರು.
೦೮ ಯರಗಟ್ಟಿ ೦೧
ಪೋಟೋ ಶೀರ್ಷಿಕೆ
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ