Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮೀಕ್ಷೆಯಲ್ಲಿ ಧರ್ಮ ಬೌದ್ಧ ಎಂದು ದಾಖಲಿಸುವಂತೆ ಜನಜಾಗೃತಿ ಮೂಡಿಸಿ: ವೆಂಕಟೇಶ ವಗ್ಯಾನವರ

ವಿಜಯಪುರ: ಸರ್ಕಾರದಿಂದ ನಡೆಸಲಾಗುತ್ತಿರುವ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಜಿಲ್ಲೆಯ ಎಲ್ಲಾ ಡಾ ಬಾಬಾಸಾಹೇಬ ಅಂಬೇಡ್ಕರ್ ಅನುಯಾಯಿಗಳು ತಮ್ಮ ಧರ್ಮ ಬೌದ್ಧ ಎಂದು ದಾಖಲಿಸುವಂತೆ ಜನಜಾಗೃತಿ ಮೂಡಿಸಬೇಕು ಎಂದು ಭಾರತೀಯ ಬೌದ್ಧ ಮಹಾಸಭಾ ಜಿಲ್ಲಾಧ್ಯಕ್ಷರಾದ ವೆಂಕಟೇಶ ವಗ್ಯಾನವರ ಅವರು ಸಲಹೆ ನೀಡಿದ್ದಾರೆ.
ಜಿಲ್ಲೆಯ ಎಲ್ಲಾ ಬೌದ್ಧ ಸಂಘಸAಸ್ಥೆಗಳ ಪದಾಧಿಕಾರಿಗಳು, ಬೌದ್ಧ ಉಪಸಕರು, ಎಲ್ಲಾ ದಲಿತ ಸಂಘಟನೆಗಳ ನಾಯಕರು ಮತ್ತು ಎಲ್ಲಾ ಸಮಾಜದ ಮುಖಂಡರು  ಜಾಗೃತ ಮೂಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಡಾ. ಬಾಬಾಸಾಹೇಬ ಅಂಬೇಡ್ಕರ್ ಅನುಯಾಯಿಗಳು ತಮ್ಮ ಧರ್ಮ (ಕಾಲಂ ನಂ.೮) ಬೌದ್ಧ (ಕ್ರಮ ಸಂಖ್ಯೆ ೬) ಎಂದು ತಮ್ಮ ಜಾತಿ ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ತಮ್ಮ ಮೂಲ ಜಾತಿ ಹೊಲೆಯ, ಛಲವಾದಿ, ಮಾದಿಗ ಇತ್ಯಾದಿ (ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ೧೦೧ ಜಾತಿಗಳಲ್ಲಿ ತಮ್ಮ ಮೂಲ ಜಾತಿ) ದಾಖಲಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಬಾಬಾಸಾಹೇಬರು ನಮಗೂ ಮನುಷ್ಯರಂತೆ ಬದುಕಲು ಎಲ್ಲಾ ರೀತಿಯ ಅವಕಾಶಗಳನ್ನು ಕೊಟ್ಟು ಕೊನೆಗೆ ಬುದ್ಧ ಮಾರ್ಗ ತೊರಿದ್ದಾರೆ ಅದಕ್ಕಾಗಿ ನಾವೆಲ್ಲ ಅವರು ತೊರಿದ ಮಾರ್ಗದಂತೆ ಬೌದ್ಧರಾಗಬೇಕಾಗಿದೆ ಅದಕ್ಕಾಗಿ ನಾವು ಧರ್ಮದ ಕಾಲಂನಲ್ಲಿ ಖಡ್ಡಾಯವಾಗಿ ಬೌದ್ಧ ಎಂದು ಬರೆಸುವಂತೆ ಎಲ್ಲಾ ಮನವಿ ಮಾಡಿದ್ದಾರೆ.
ಧರ್ಮ 'ಬೌದ್ಧ'ಎಂದು ಜಾತಿ ಹೊಲೆಯ, ಛಲವಾದಿ, ಮಾದಿಗ ಎಂದು ದಾಖಲಿಸಿದರೆ ದಲಿತರಿಗೆ ಪರಿಶಿಷ್ಟ ಜಾತಿಯ ಮೀಸಲಾತಿ ಸೌಲಭ್ಯಗಳು ರದ್ದಾಗುವುದಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ೧೯೯೦ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಪರಿಶಿಷ್ಟ ಜಾತಿಯಿಂದ ಬೌದ್ಧ ಧರ್ಮಕ್ಕೆ ಮತಾಂತರ ಹೊಂದಿದರೆ ಅವರ ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಮೀಸಲಾತಿ ರದ್ದಾಗದೇ ಯಥಾವತ್ತಾಗಿ ಮುಂದುವರೆಯುತ್ತದೆ.
ಕೇಂದ್ರ ಸರ್ಕಾರದ ಈ ಆದೇಶಕ್ಕೆ ಪೂರಕವಾಗಿ ವಿವಿಧ ರಾಜ್ಯ ಸರ್ಕಾರಗಳು ಮರು ಆದೇಶ ಹೊರಡಿಸಿ, ಪರಿಶಿಷ್ಟ ಜಾತಿಯ ಬೌದ್ಧರಿಗೆ ಮೀಸಲಾತಿ ಸೌಲಭ್ಯ ನೀಡುತ್ತಾ ಬಂದಿದ್ದಾರೆ. ಅದಕ್ಕಾಗಿ ದಲಿತರು ಗೊಂದಲಕ್ಕೆ ಒಳಗಾಗದೆ, ಭಯ ಬಿಟ್ಟು, ತಮ್ಮ ಧರ್ಮ ಬೌದ್ಧ ಎಂದು ಜಾತಿ ಹೊಲೆಯ, ಮಾದಿಗ ಎಂದು ಕಡ್ಡಾಯವಾಗಿ ದಾಖಲಿಸಬೇಕೆಂದು ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ಜನರಿಗೆ ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ