LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಹಿರಿಯ ನಟ ಅಸ್ರಾನಿ ಇನ್ನಿಲ್ಲ: ಗಣ್ಯರ ಕಂಬನಿ

ಮುಂಬೈ: ಪ್ರಸಿದ್ಧ ಹಾಸ್ಯ ನಟ ಮತ್ತು ಬಾಲಿವುಡ್ ಅನುಭವಿ ಕಲಾವಿದ ಗೋವರ್ಧನ್ ಅಸ್ರಾನಿ 84 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ.


ಸಾವಿಗೂ ಮುನ್ನ ದೀಪಾವಳಿ ಶುಭಾಶಯ ಕೋರಿದ್ದ ನಟ: ಸೋಮವಾರ ಸಾಂತಾಕ್ರೂಜ್ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಅವರ ಸಾವಿಗೆ ಕೆಲವೇ ಗಂಟೆಗಳ ಮೊದಲು ನಟ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರುವ ಪೋಸ್ಟ್ ಹಂಚಿಕೊಂಡಿದ್ದರು. ಅಸ್ರಾನಿ ಅವರು ಭಾರತೀಯ ಚಿತ್ರರಂಗದ ಅತ್ಯಂತ ಪ್ರಸಿದ್ಧ ಹಾಸ್ಯ ನಟರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು.


ಪುಣೆಯ FTIIನಲ್ಲಿ ತರಬೇತಿ ಪಡೆದಿದ್ದ ಅಸ್ರಾನಿ: ಐದು ದಶಕಗಳಿಗೂ ಹೆಚ್ಚು ಕಾಲದ ತಮ್ಮ ವೃತ್ತಿಜೀವನದಲ್ಲಿ ಅವರು 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಪುಣೆಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ (FTII) ತರಬೇತಿ ಪಡೆದುಕೊಂಡಿದ್ದರು. 1960 ರ ದಶಕದ ಮಧ್ಯಭಾಗದಲ್ಲಿ ಹಿಂದಿ ಚಲನಚಿತ್ರೋದ್ಯಮಕ್ಕೆ ಪ್ರವೇಶಿಸುವ ಮೊದಲು ತಮ್ಮ ಕೌಶಲ್ಯವನ್ನು ತೋರ್ಪಡಿಸಿದ್ದರು. ಗಂಭೀರ ಮತ್ತು ಪೋಷಕ ಪಾತ್ರಗಳೊಂದಿಗೆ ತಮ್ಮ ನಟನಾ ಕೌಶಲವನ್ನು ಶುರು ಮಾಡಿದರೂ ಕೂಡಾ ಅಸ್ರಾನಿ ಅವರು ಹಾಸ್ಯ ಕಲಾವಿದರಾಗಿ ತಮ್ಮನ್ನು ಗುರುತಿಸಿಕೊಂಡರು. 1970 ಮತ್ತು 1980 ರ ದಶಕಗಳಲ್ಲಿ ಅವರು ಹಿಂದಿ ಚಿತ್ರರಂಗದ ಪ್ರಮುಖ ಹಾಸ್ಯ ನಟರಾಗಿ ಗಮನ ಸೆಳೆದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್