Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ನಿಧನ

ಬೆಂಗಳೂರು,ಏ.03: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಎರಡು ವರ್ಷದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ ಜಯಾ, ಪುತ್ರ ಅಭಿಜಿತ್‌ ಇದ್ದಾರೆ. ಬೆಂಗಳೂರಿನ ಬನ್ನೇರಘಟ್ಟ ರಸ್ತೆಯಲ್ಲಿರುವ ಸೌತ್‌ ಸಿಟಿ ಅಪಾರ್ಟ್‌ ಮೆಂಟ್‌ ಗೆ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೂಲತಃ ಶಿರಸಿ ತಾಲ್ಲೂಕಿನವರಾದ ಎಂ.ಕೆ.ಭಾಸ್ಕರರಾವ್‌ ಅವರು ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ. ಅಲ್ಲಿಯೇ ಶಿಕ್ಷಣ ಮುಗಿಸಿ ನಂತರ ಪತ್ರಿಕೋದ್ಯಮ ಸೇರಿದವರು. ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು.

ಸಮಾಜಮುಖಿ ಪತ್ರಕರ್ತರಾಗಿದ್ದ ಭಾಸ್ಕರರಾವ್‌ ತಮ್ಮ ಹರಿತ ಬರವಣಿಗೆ ಮಾತ್ರವಲ್ಲದೇ ಮಾತಿನಿಂದಲೂ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆ ಹಲವಾರು ಚಾನೆಲ್‌ಗಳಲ್ಲಿ ವಿಶ್ಲೇಷಣೆ ಮಾಡುತಿದ್ದರು. ಪ್ರಚಲಿತ ವಿದ್ಯಾಮಾನಗಳ ಕುರಿತು ನಿಖರವಾಗಿ ಮಾತನಾಡುವ ಜ್ಞಾನ ಅವರಲ್ಲಿತ್ತು. ಹಿರಿಯ ಪತ್ರಕರ್ತರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*