Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ನಿಧನ

ಬೆಂಗಳೂರು,ಏ.03: ಹಿರಿಯ ಪತ್ರಕರ್ತ ಎಂ.ಕೆ.ಭಾಸ್ಕರರಾವ್‌ ಅವರು ಬೆಂಗಳೂರಿನಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಎರಡು ವರ್ಷದಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಪತ್ನಿ ಜಯಾ, ಪುತ್ರ ಅಭಿಜಿತ್‌ ಇದ್ದಾರೆ. ಬೆಂಗಳೂರಿನ ಬನ್ನೇರಘಟ್ಟ ರಸ್ತೆಯಲ್ಲಿರುವ ಸೌತ್‌ ಸಿಟಿ ಅಪಾರ್ಟ್‌ ಮೆಂಟ್‌ ಗೆ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೂಲತಃ ಶಿರಸಿ ತಾಲ್ಲೂಕಿನವರಾದ ಎಂ.ಕೆ.ಭಾಸ್ಕರರಾವ್‌ ಅವರು ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ. ಅಲ್ಲಿಯೇ ಶಿಕ್ಷಣ ಮುಗಿಸಿ ನಂತರ ಪತ್ರಿಕೋದ್ಯಮ ಸೇರಿದವರು. ಪ್ರಜಾವಾಣಿ ಪತ್ರಿಕೆಯಲ್ಲಿಯೇ ಮೂರು ದಶಕಕ್ಕೂ ಅಧಿಕ ಕಾಲ ಕೆಲಸ ಮಾಡಿದ್ದರು.

ಸಮಾಜಮುಖಿ ಪತ್ರಕರ್ತರಾಗಿದ್ದ ಭಾಸ್ಕರರಾವ್‌ ತಮ್ಮ ಹರಿತ ಬರವಣಿಗೆ ಮಾತ್ರವಲ್ಲದೇ ಮಾತಿನಿಂದಲೂ ಗುರುತಿಸಿಕೊಂಡಿದ್ದರು. ಚುನಾವಣೆ ವೇಳೆ ಹಲವಾರು ಚಾನೆಲ್‌ಗಳಲ್ಲಿ ವಿಶ್ಲೇಷಣೆ ಮಾಡುತಿದ್ದರು. ಪ್ರಚಲಿತ ವಿದ್ಯಾಮಾನಗಳ ಕುರಿತು ನಿಖರವಾಗಿ ಮಾತನಾಡುವ ಜ್ಞಾನ ಅವರಲ್ಲಿತ್ತು. ಹಿರಿಯ ಪತ್ರಕರ್ತರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ