ಇಂದು ಮುಂಜಾನೆ ಉಪರಾಷ್ಟ್ರಪತಿಗಳಿಂದ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬ್ರೇಕ್ ಫಾಸ್ಟ್ಗೆ ಆಹ್ವಾನ ಬಂದಿತ್ತು. ಉಪರಾಷ್ಟ್ರಪತಿಗಳನ್ನು ಭೇಟಿಯಾದ ಚಿತ್ರವನ್ನು ನಂತರ ಫೇಸ್ಬುಕ್ನಲ್ಲಿ ಹಂಚಿಕೊಂಡ ಡಿಕೆಶಿ, “ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಜಗದೀಪ್ ಧನಕರ್ ಅವರನ್ನು ಇಂದು ರಾಜಭವನದಲ್ಲಿ ಸೌಹಾರ್ದಯುತವಾಗಿ ಭೇಟಿಯಾದೆ. ಈ ವೇಳೆ ಪ್ರಾದೇಶಿಕ ಹಾಗೂ ರಾಷ್ಟ್ರೀಯ ವಿಚಾರಗಳ ಕುರಿತು ಪರಸ್ಪರ ಚರ್ಚಿಸಿದೆವು” ಎಂದು ಬರೆದುಕೊಂಡಿದ್ದಾರೆ.
ಇದಕ್ಕೆ ನೆಟ್ಟಿಗರಿಂದ ವಿಧವಿಧವಾದ ಪ್ರತಿಕ್ರಿಯೆಗಳು ಕಂಡುಬಂದವು. “ಶುಭವಾಗಲಿ ನಿಮಗೆ. ಆದಷ್ಟೂ ಶೀಘ್ರ ಬಿಜೆಪಿಗೆ ನೀವು ಬರುವಂತಾಗಲಿ. ನಂತರ, ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಆಶಿಸುತ್ತೇನೆ” ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. “ಇದೆಲ್ಲ ಬೇಡ ನಮಗೆ ಸಿಎಂ ಆಗಬೇಕು” ಎಂದು ಮತ್ತೊಬ್ಬರು ಬರೆದಿದ್ದಾರೆ.