Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಚಿತ್ರ ಕಾಲಾಪತ್ಥರ್ 

     ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ 'ಕಾಲಾಪತ್ಥರ್' ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.


          ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ ಎಸ್ ವಾಸು 'ಕಾಲಾಪತ್ಥರ್' ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು. ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ ಮಾತನಾಡಿ "ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಆಭಾರಿ. ಈಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇನ್ನು ಮುಂದೆ ನಿಮ್ಮ ಪ್ರೋತ್ಸಾಹ ಹೆಚ್ಚು ಬೇಕು" ಎಂದರು.


     "ನನ್ನದು ಈ ಚಿತ್ರದಲ್ಲಿ ಶಿಕ್ಷಕಿಯ ಪಾತ್ರ. ಗಂಗ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ದರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ" ಎಂದರು ನಾಯಕಿ ಧನ್ಯ ರಾಮಕುಮಾರ್.


 "ನಾನು ಕನ್ನಡ ಚಿತ್ರರಂಗಕ್ಕೆ ಬಂದು ಹದಿನೈದು ವರ್ಷಗಳಾಯಿತು. ಸೆಪ್ಟೆಂಬರ್ ಗೆ ಸೂರಿ ಅವರ ನಿರ್ದೇಶನದಲ್ಲಿ ನಾನು ನಾಯಕನಾಗಿ ನಟಿಸಿದ್ದ 'ಕೆಂಡಸಂಪಿಗೆ' ಚಿತ್ರ ತೆರೆಕಂಡು ಒಂಭತ್ತು ವರ್ಷಗಳಾಗುತ್ತಿದೆ.


ನಾನು ನಿರ್ದೇಶಿಸಿ, ನಾಯಕನಾಗೂ ನಟಿಸಿರುವ 'ಕಾಲಾಪತ್ಥರ್' ಚಿತ್ರ ಕೂಡ ಸೆಪ್ಟೆಂಬರ್ ನಲ್ಲೇ ಬಿಡುಗಡೆಯಾಗುತ್ತಿರುವುದು  ಖುಷಿಯಾಗಿದೆ. 'ಕಾಲಾಪತ್ಥರ್',  ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ಸತ್ಯಪ್ರಕಾಶ್ ಅವರು ಕಥೆ ಬರೆದಿದ್ದಾರೆ. ವಿಜಾಪುರದ ಬಳಿ ಹೆಚ್ಚು ಚಿತ್ರೀಕರಣವಾಗಿದೆ.


ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ನಮ್ಮ ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ" ಎಂದರು ನಿರ್ದೇಶಕ ಹಾಗೂ ನಾಯಕ ವಿಕ್ಕಿ ವರುಣ್‌.  ಛಾಯಾಗ್ರಾಹಕ ಸಂದೀಪ್  ಉಪಸ್ಥಿತರಿದ್ದರು.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ