ನವದೆಹಲಿ, ಆಗಸ್ಟ್ 25: ಆರೋಪಿಗಳು ಪ್ರಕರಣದಲ್ಲಿ ಖುಲಾಸೆಗೊಂಡರೆ ಸಂತ್ರಸ್ತರು ನೇರವಾಗಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ. ಆರೋಪಿಯ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕು ಸಂತ್ರಸ್ತರಿಗೆ ನೀಡಲಾಗಿದೆ. ಸುಪ್ರೀಂಕೋರ್ಟ್ ಸಂತ್ರಸ್ತರು ಹಾಗೂ ಅವರ ಕಾನೂನು ಬದ್ಧ ಉತ್ತರಾಧಿಕಾರಿಗಳು ಆರೋಪಿಯ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡಿದೆ. ವಿಚಾರಣಾ ನ್ಯಾಯಾಲಯ ಅಥವಾ ಹೈಕೋರ್ಟ್ ಆರೋಪಿಯನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ, ರಾಜ್ಯ ಅಥವಾ ದೂರುದಾರರು ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿದ್ದರು.
ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಕಳೆದ ವಾರ ಆರೋಪಿಗಳ ಖುಲಾಸೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಇನ್ನೂ ಎರಡು ವರ್ಗಗಳಿಗೆ ವಿಸ್ತರಿಸಿತು. ಅಪರಾಧದಲ್ಲಿ ನೇರವಾಗಿ ತೊಂದರೆಗೊಳಗಾದವರು ಅಥವಾ ನಷ್ಟ ಅನುಭವಿಸಿದವರು ಮತ್ತು ಸಂತ್ರಸ್ತರ ಕಾನೂನುಬದ್ಧ ಉತ್ತರಾಧಿಕಾರಿಗಳು ಮೇಲ್ಮನವಿ ಸಲ್ಲಿಸಬಹುದು. ಅಪರಾಧದ ಸಂತ್ರಸ್ತರ ಹಕ್ಕನ್ನು ಶಿಕ್ಷೆಗೊಳಗಾದ ಆರೋಪಿಯ ಹಕ್ಕಿಗೆ ಸಮಾನವಾಗಿ ಇರಿಸಬೇಕು, ಸಿಆರ್ಪಿಸಿಯ ಸೆಕ್ಷನ್ 374 ರ ಅಡಿಯಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.