LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ : ಸಿದ್ದರಾಮಯ್ಯ

ಬೆಂಗಳೂರು ಜ., ೦೯- ಮಹಾತ್ಮ‌ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತೆ ಜಾರಿಗೆ ತರುವಂತೆ ಒತ್ತಾಯಿಸಿ ನಿರ್ಣಯ ಅಂಗೀಕರಿಸಲು ಶೀಘ್ರವೇ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ.

ಇಂದು ಹೋಟೆಲ್ ಅಶೋಕಾದಲ್ಲಿ ನಡೆದ ಶಾಸಕರ ಸಭೆಯಲ್ಲಿ  ಮಾತನಾಡಿದ ಅವರು, ಇದು ಬಿಜೆಪಿಯವರ ಹುನ್ನಾರ. ಮನಮೋಹನ ಸಿಂಗ್ ಅವರು ಪ್ರಧಾನಿ ಆಗಿದ್ದಾಗ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ಬಂತು. ಇದು ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಯೋಜನೆ. ದಲಿತರು, ಮಹಿಳೆಯರು, ರೈತರಿಗೆ ಉದ್ಯೋಗ ಒದಗಿಸುವುದು ಯೋಜನೆ ಉದ್ದೇಶ. ವರ್ಷದಲ್ಲಿ ನೂರು ದಿನ ಉದ್ಯೋಗ ಅವಕಾಶ ಈ ಯೋಜನೆಯಲ್ಲಿ ಸಿಗುತ್ತಿತ್ತು. ಈ ಉದ್ಯೋಗವನ್ನೇ ಕಸಿಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಕೈ ಹಾಕಿದೆ. ಉದ್ಯೋಗದ ಹಕ್ಕು ಇಲ್ಲವಾಗಿಸಿದೆ ಎಂದರು.



ಮಹಾತ್ಮ ಗಾಂಧಿಯವರ ಹೆಸರು ತೆಗೆದು ಗೊಂದಲ ಸೃಷ್ಟಿ ಮಾಡುವ ಹುನ್ನಾರ ಇದಾಗಿದೆ. ಈ ಮೂಲಕ ಮತ್ತೆ ಗಾಂಧಿಯವರನ್ನು ಕೊಲೆ ಮಾಡಲಾಗಿದೆ. ಇದು ಸಂಘ ಪರಿವಾರದವರು ಹೇಳಿ ಕೊಟ್ಟಿರುವ ಪಾಠ ಎಂದರು.

28 ಕೋಟಿ ದಲಿತರಿಗೆ ಇದರಿಂದ ಅನ್ಯಾಯವಾಗಿದೆ. ನಮ್ಮ ಹೋರಾಟ ತೀವ್ರವಾಗಿ ಇರಬೇಕು. ಬಡವರ ಉದ್ಯೋಗದ ಹಕ್ಕು ಕಸಿದುಕೊಂಡವರಿಗೆ ಪಾಠ ಕಲಿಸಬೇಕು. ಬಡವರು ಆರ್ಥಿಕವಾಗಿ ಸಬಲರಾಗುವುದನ್ನು ಸಂಘ ಪರಿವಾರ ಸಹಿಸುವುದಿಲ್ಲ. ಮನ್ರೆಗಾ ಕಾಯಿದೆ ಮತ್ತೆ ಜಾರಿ ಅಗುವ ರೀತಿ ಜನಾಂದೋಲನ ನಡೆಯಬೇಕು. ಪ್ರತಿ ಗ್ರಾಮ ಪಂಚಾಯಿತಿ ಸದಸ್ಯ ನರೇಗಾದಲ್ಲಿ ಕೆಲಸ ಮಾಡುತ್ತಿರುವವರನ್ನ ತಲುಪಬೇಕು ಎಂದರು.

ಈ ವಿಷಯದ ಬಗ್ಗೆ ಜನರನ್ನೂ ಜಾಗೃತಗೊಳಿಸುವ ಕೆಲಸವನ್ನು ಶಾಸಕರು ಮಾಡಬೇಕು. ನಮ್ಮ ಹೋರಾಟ ಜನಾಂದೋಲನವಾಗಿ ರೂಪುಗೊಳ್ಳುವಂತಹ ವಾತಾವರಣ ನಿರ್ಮಾಣ ಆಗಬೇಕಿದೆ. ಕಾಂಗ್ರೆಸ್ ಜಾರಿಗೆ ತಂದ ಕಾರ್ಯಕ್ರಮವನ್ನು ರದ್ಧು ಮಾಡಿ ಉದ್ಯೋಗದ ಹಕ್ಕು ಕಸಿದುಕೊಂಡಿರುವುದು ಸಂವಿಧಾನ ಬಾಹಿರ ಕೆಲಸ ಎಂದು ಆಕ್ರೋಶ ವ್ಯಕ್ತಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ