Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನ ಪರಿಷತ್‌ ಚುನಾವಣೆ: ಜೆಡಿಎಸ್ ಬಂಡಾಯ ನಾಯಕರ ಸಭೆಯಲ್ಲಿ ಹೈಡ್ರಾಮಾ

ಮೈಸೂರು,17: ದಕ್ಷಿಣ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ.ವಿವೇಕಾನಂದ ಪರ ಒಗ್ಗಟ್ಟಿನ ಹೋರಾಟಕ್ಕೆ ಬಿಜೆಪಿ-ಜೆಡಿಎಸ್ ಸಜ್ಜಾಗುತ್ತಿರುವ ನಡುವಲ್ಲೇ ಮತ್ತೊಂದೆಡೆ ಬಂಡಾಯ ಬಿಸಿ ತಟ್ಟಲು ಆರಂಭಿಸಿದೆ.

ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡ, ಎಂಎಲ್ ಸಿ ಕೆ.ಟಿ.ಶ್ರೀಕಂಠೇಗೌಡ ಅವರು ಅಸಮಾಧಾನಗೊಂಡಿದ್ದು, ಪತ್ಯೇಕವಾಹಗಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದರು. ಇದಕ್ಕೆ ಸಂಬಂಧಿಸಿ ಮೈಸೂರಿನ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರ ಸಭೆ ಕರೆದು, ಪಕ್ಷೇತರ ಸ್ಪರ್ಧೆಯ ಬಗ್ಗೆ ಹೇಳಿಕೆ ನೀಡಿದ್ದರು.

ಈ ವಿಚಾರ ತಿಳಿದ ತಿಳಿದ ಜೆಡಿಎಸ್ ಉನ್ನತಾಧಿಕಾರ ಸಮಿತಿ ಅಧ್ಯಕ್ಷ ಹಾಗೂ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್ ಮತ್ತಿತರರು ಸ್ಥಳಕ್ಕೆ ದೌಡಾಯಿಸಿ, ಮನವೊಲಿಸುವ ಯತ್ನ ಮಾಡಿದರು. ಈ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಶ್ರೀಕಂಠೇಗೌಡ ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿ ಶುರುವಾಗಿ, ಹೈಡ್ರಾಮಾ ನಡೆಯಿತು.

ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಅರ್ಹರಲ್ಲದವರನ್ನು ಕಣಕ್ಕಿಳಿಸಲಾಗಿದೆ. ಶ್ರೀಕಂಠೇಗೌಡ ಅವರು ಶಿಕ್ಷಕರಾಗಿದ್ದು, ಪ್ರಾಂಶುಪಾಲರ ಸಂಘದ ಅಧ್ಯಕ್ಷರಾಗಿದ್ದರು. ಅವರು ಸ್ವತಂತ್ರವಾಗಿ ಸ್ಪರ್ಧಿಸಬೇಕು' ಎಂದು ಶ್ರೀಕಂಠೇಗೌಡ ಬೆಂಬಲಿಗರು ಹೇಳಿದರು.

ಇದೇ ವೇಳೆ, ಮತ್ತೊಂದು ಗುಂಪಿನ ಮುಖಂಡರು ಶ್ರೀಕಂಠೇಗೌಡರು ಪಕ್ಷದ ಮೌಲ್ಯಗಳ ಪಾಲನೆ ಮಾಡಬೇಕೇ ವಿನಃ ವಿರೋಧ ಪಕ್ಷದ ಅಭ್ಯರ್ಥಿಗಳ ಕೈಗೊಂಬೆಯಾಗಬಾರದು ಎಂದು ಹೇಳಿದರು.

ಬಳಿಕ ಜೆಡಿಎಸ್ ಕಾರ್ಯಕರ್ತರು ಶ್ರೀಕಂಠೇಗೌಡ ನಿರ್ಧಾರವನ್ನು ವಿರೋಧಿಸಿದ್ದು, ಪಕ್ಷೇತರ ಸ್ಪರ್ಧೆ ಮಾಡದಂತೆ ಎಳೆದಾಡಿದರು. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಗಿದ್ದು, ಎಳೆದಾಟದಿಂದಾಗಿ ದೈಹಿಕವಾಗಿ ಬಳಲಿದಂತಾಗಿ ಗಾಯಗೊಂಡ ಶ್ರೀಕಂಠೇಗೌಡರನ್ನು ನೇರವಾಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಇದರಿಂದ ಇತ್ತ ಬಂಡಾಯ ನಾಮಪತ್ರ ಸಲ್ಲಿಕೆ ಸಾಧ್ಯವಾಗಲಿಲ್ಲ. ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಮೇ 16 ಕಡೆಯ ದಿನವಾಗಿತ್ತು.

ಈ ನಡುವೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ನಗರ ಬಿಜೆಪಿ ಅಧ್ಯಕ್ಷ ಎಲ್.ನರೇಂದ್ರ ಮತ್ತಿತರರು ನಿಂಗರಾಜು ಅವರೊಂದಿಗೆ ಸಭೆ ನಡೆಸಿ ಪತ್ರ ಹಿಂಪಡೆಯುವಂತೆ ಮನವಿ ಮಾಡಿಕೊಂಡರು. ನಿಂಗರಾಜು ವಿವೇಕಾನಂದರ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಅಶೋಕ್ ಹೇಳಿದರು.

ಬಿಜೆಪಿಯು ನಿಂಗಂರಾಜು ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿ ನಂತರ ತನ್ನ ಮಿತ್ರ ಪಕ್ಷ ಜೆಡಿಎಸ್‌ಗೆ ಸ್ಥಾನ ಬಿಟ್ಟುಕೊಟ್ಟಿತ್ತು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ