Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವ್ಯ ಕಮ್ಮಟ ಏರ್ಪಡಿಸಲು ನಿರ್ಧಾರ: ವಿದ್ಯಾಧರ ಮುತಾಲಿಕ್ ದೇಸಾಯಿ

ಬೆಳಗಾವಿ,ಏ.30: ವಿದ್ಯಾಧರ ಕನ್ನಡ ಪ್ರತಿಷ್ಠಾನ ಧಾರವಾಡ, ಮುಂಬೈ, ತೆಲಂಗಾಣ ಮತ್ತು ಹೊಂಬೆಳಕು ಸಾಂಸ್ಕೃತಿಕ ಸಂಘ ಬೆಳಗಾವಿ ಇವರ ಸಹಯೋಗದಲ್ಲಿ ಏರ್ಪಡಿಸಿದ ಕನ್ನಡ ನುಡಿ ತೇರು ೨೦೨೪ರ ನಿಮಿತ್ಯ ಹಮ್ಮಿಕೊಂಡ ಪಾಲಕರಿಗೆ ಸನ್ಮಾನ, ಸಾಧಕರಿಗೆ ಸನ್ಮಾನ, ಪ್ರಶಸ್ತಿ ಗೌರವ ಅರ್ಪಣೆ, ಕವಿಗೋಷ್ಠಿ, ಕೃತಿಗಳ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿದ್ಯಾಧರ ಮುತಾಲಿಕ ದೇಸಾಯಿ ಅವರು, ಇಂದಿನ ಯುವ ಪೀಳಿಗೆಗೆ ಕಾವ್ಯದ ಪರಂಪರೆ ಮತ್ತು ಕಾವ್ಯ ರಚನೆ ತಿಳುವಳಿಕೆ ಮೂಡಿಸುವುದು ಕಾವ್ಯ ಕಮ್ಮಟ ಏರ್ಪಡಿಸುವುದು ಅಗತ್ಯ ಎಂದರು. ಈ ದಿಸೆಯಲ್ಲಿ ನಮ್ಮ ಪ್ರತಿಷ್ಠಾನ ಸದ್ಯದಲ್ಲಿಯೇ ಒಂದು ಕಾವ್ಯ ಕಮ್ಮಟ ಏರ್ಪಡಿಸುವುದನ್ನು ಘೋಷಿಸಿದರು.

ಇದೇ ಸಮಾರಂಭದಲ್ಲಿ ಡಾ. ಶ್ಯಾಮಲಾ ಪ್ರಕಾಶ ಅವರು, ರಚಿಸಿದ ಮಾತಿನೊಳಗಿನ ಧಾತು ದಾಸ ಸಾಹಿತ್ಯ ಮತ್ತು ಸಂಗೀತ ಚಿತ್ರಣಗಳು ಎಂಬ ಕೃತಿಯನ್ನು ಸ.ರಾ.ಸುಳಕುಡೆ ಅವರು ಬಿಡುಗಡೆಗೊಳಿಸಿದರು. ವಿದೂಷಿ ಡಾ. ಶ್ಯಾಮಲಾ ಪ್ರಕಾಶ ಅವರು ಈ ಕೃತಿಯಲ್ಲಿ ದಾಸ ಸಾಹಿತ್ಯದಲ್ಲಿ ಮೂಡಿ ಬಂದಿರುವ ಸಂಗೀತ ಚಿತ್ರಣಗಳನ್ನು ಸಮಗ್ರವಾಗಿ ವಿಶ್ಲೇಷಿಸಿದ್ದನ್ನು ಶ್ಲಾಘಿಸಿದರು.



ಕಥೆ ಹೇಳುವೆ ಮತ್ತು ಆಯ್ದ ಇತರ ಕತೆಗಳು ಕೃತಿಯನ್ನು ಕಸಾಪದ ಅಧ್ಯಕ್ಷರಾದ ಮಂಗಳಾ ಮೆಟಗುಡ್ಡ ಬಿಡುಗಡೆಗೊಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಕಸಾಪ ಹಮ್ಮಿಕೊಂಡ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಶಿವಾಜಿ ಕಾಗಣೇಕರ, ಮಂಗಳಾ ಮೆಟಗುಡ್ಡ, ಸ.ರಾ.ಸುಳಕುಡೆ, ಎಂ.ವೈ.ಮೆಣಸಿಣಕಾಯಿ, ಆರ್.ಬಿ.ಬನಶಂಕರಿ, ಶೋಭಾ ಅ ಮೇಟಿ, ಇವರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.

ಈ ಸಮಾರಂಭದಲ್ಲಿ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ ಸರಸ್ವತಿ ಆರ್. ಕಳಸದ ಅವರು ಸಮಕಾಲೀನ ಕಾವ್ಯ ಕುರಿತು ವಿಶ್ಲೇಷಿಸಿದರು. ಸಮಕಾಲೀನ ಕನ್ನಡ ಮತ್ತು ಕಾವ್ಯ ಕುರಿತು ಬೆಂಗಳೂರಿನ ಮುದಲ್ ವಿಜಯ ಇವರು ವಿಶೇಷ ಉಪನ್ಯಾಸ ನೀಡಿ ಇಂದಿನ ಬಹುಪಾಲು ಕವಿಗಳು ವಾಚ್ಯ ಕವಿತೆಗಳನ್ನು ರಚಿಸುತ್ತಿರುವುದು ಕಂಡು ಬರುತ್ತದೆ. ಆದ ಕಾರಣ ಅವರಿಗೆ ಒಂದು ಕಾವ್ಯ ಕಮ್ಮಟ ಏರ್ಪಡಿಸುವುದು ಅಗತ್ಯ ಎಂದರು.

ಕವಿ ಸಮ್ಮೇಳನವನ್ನು ಉದ್ಘಾಟಿಸಿದ ಗಣಪತಿ ಹೆಗಡೆ ಇವರು, ಕನ್ನಡ ಕಾವ್ಯ ನಡೆದುಬಂದ ದಾರಿಯನ್ನು ವಿವರಿಸಿದರು. ಈ ಸಮಾರಂಭದಲ್ಲಿ ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ೨೦ ಆಯ್ದ ಕವಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ಸಮಾರಂಭದಲ್ಲಿ ಭಾಗವಹಿಸಿದ ಸುರೇಶ ಕೋರಕೊಪ್ಪ ಇವರು ಕನ್ನಡ ಕಾವ್ಯ ಪರಂಪರೆಯಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಕ್ಕೆ ವಿಶೇಷ ಮಹತ್ವವಿದೆ. ಆಧುನಿಕ ಕನ್ನಡ ಕವಿಗಳ ಕಾವ್ಯದಲ್ಲಿಯೂ ಕಾವ್ಯಾಂಶಗಳಿವೆ. ಅವುಗಳನ್ನು ಇಂದಿನ ಕವಿಗಳು ಅಧ್ಯಯನ ಮಾಡುವುದು ಅಗತ್ಯ ಎಂದರು.

ವಿದ್ಯಾಧರ ಪ್ರತಿಷ್ಠಾನದ ಸದಸ್ಯರಾದ ಸುನೀತಾ ಪ್ರಕಾಶ, ಸುರೇಶ ರಾಜಮಾನೆ, ಎನ್.ಆರ್.ಶೋಭಾ, ಜಾನರ್ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮವನ್ನು ಸುನೀತಾ ಪ್ರಕಾಶ ಅವರು ನಿರೂಪಿಸಿದರು. ಸುರೇಶ ರಾಜಮಾನೆ ಅವರು ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ