Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ವಜಾಗೊಳಿಸಿದ ವಿಜಿಲೆನ್ಸ್ ಇಲಾಖೆ

ನವದೆಹಲಿ,ಏಪ್ರಿಲ್ 11: ಇತ್ತೀಚೆಗೆ ರಾಷ್ಟ್ರ ರಾಜಧಾನಿ ರಾಜಕೀಯ ವಲಯದಲ್ಲಿ ಸಾಕಷ್ಟು ಬೆಳವಣಿಗೆ ಕಾಣುತ್ತಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ವಿಜಿಲೆನ್ಸ್ ಇಲಾಖೆ ವಜಾಗೊಳಿಸಿದೆ.


ಬಿಭವ್ ಕುಮಾರ್ ಅವರ ನೇಮಕಾತಿ ಪ್ರಕ್ರಿಯೆ ಸರಿಯಾಗಿ ನಡೆದಿಲ್ಲ ಎಂದು ವಿಜಿಲೆನ್ಸ್ ಇಲಾಖೆ ವಜಾಗೊಳಿಸುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈಗಾಗಲೇ ದೆಹಲಿ ಮದ್ಯ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿರುವ ಅರವಿಂದ್ ಕೇಜ್ರಿವಾಲ್ ಅವರಿಗೆ ಮತ್ತೊಂದು ಹೊಡೆತ ಬಿದ್ದಂತಾಗಿದೆ. ಬುಧವಾರ ತಿಹಾರ್​ ಜೈಲಿನಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಿಭವ್ ಕುಮಾರ್ ಭೇಟಿಯಾಗಿದ್ದರು. ವಿಜಿಲೆನ್ಸ್ ಇಲಾಖೆಯ ವಿಶೇಷ ಕಾರ್ಯದರ್ಶಿ ವೈವಿವಿಜೆ ರಾಜಶೇಖರ್ ಅವರು ಹೊರಡಿಸಿರುವ ಐದು ಪುಟಗಳ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ.


ಮದ್ಯದ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಸೋಮವಾರ ಬಿಭವ್ ಕುಮಾರ್ ಅವರನ್ನು ವಿಚಾರಣೆ ನಡೆಸಿತ್ತು. ಪಿಎಂಎಲ್‌ಎ ನಿಬಂಧನೆಗಳ ಅಡಿ ಬಿಭವ್ ಕುಮಾರ್ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಈ ಹಿಂದೆ ಫೆಬ್ರವರಿಯಲ್ಲೂ ಇಡಿ ಅಧಿಕಾರಿಗಳ ತಂಡ ಬಿಭವ್​ ಮನೆ ಮೇಲೆ ದಾಳಿ ನಡೆಸಿ 16 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.


ಆಗ ಅರವಿಂದ್ ಕೇಜ್ರಿವಾಲ್ ಇಡಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜಕೀಯ ದುರುದ್ದೇಶದಿಂದ ಇದೆಲ್ಲ ಮಾಡಲಾಗುತ್ತಿದೆ. ಬಿಭವ್ ಕುಮಾರ್ ಅವರ ಮನೆ ಮೇಲೆ 23 ಇಡಿ ಅಧಿಕಾರಿಗಳು ದಾಳಿ ನಡೆಸಿ 16 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಸಮಗ್ರ ತನಿಖೆಯ ನಂತರ ಅವರಿಗೆ ಒಂದೇ ಒಂದು ಪೈಸೆ, ಯಾವುದೇ ಆಭರಣ, ಆಸ್ತಿ, ಕಾಗದಗಳು ಕಂಡು ಬಂದಿಲ್ಲ. ನಮಗೆ ಕಿರುಕುಳ ನೀಡಲು, ಆಮ್ ಆದ್ಮಿ ಪಕ್ಷವನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಆರೋಪಿಸಿದ್ದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ